ಪುಟಗಳು

ಸೋಮವಾರ, ಏಪ್ರಿಲ್ 29, 2013

ಮೋಪಳಾ ಭಯೋತ್ಪಾದನೆ--ರಕ್ತಬೀಜಾಸುರನ ಸಂತತಿ: ಭಾಗ- ೩



ಅದು ದೇವರ ನಾಡೆಂದು ಕರೆಯಲ್ಪಡುತ್ತಿತ್ತು...ಆದರೆ ಅಂದಿನಿಂದ ದೆವ್ವಗಳ ನಾಡಾಗಿ ಬದಲಾಗುತ್ತಿದೆ...
ಮೋಪಳಾ ಭಯೋತ್ಪಾದನೆ--ರಕ್ತಬೀಜಾಸುರನ ಸಂತತಿ: ಭಾಗ- :


              ಕಲ್ಲಿಕೋಟೆಯ ಮುದುಮಣೆಯಿಲ್ಲಂ ಎಂಬೆಡೆಯ ದೇವಾಲಯದ ಗರ್ಭಗೃಹದಲ್ಲಿ ಬಂಡುಕೋರ ನಾಯಕನೊಬ್ಬ ಕುಳಿತು ದರ್ಬಾರ್ ನಡೆಸುತ್ತಿದ್ದ! ಸ್ಥಳೀಯರನ್ನು ಬಂಧಿಸಿ ಅವನ ಮುಂದೆ ಸಾಲಾಗಿ ಕರೆ ತರಲಾಗುತ್ತಿತ್ತು. ಅಲ್ಲಿ ಇಸ್ಲಾಮಿಗೆ ಪರಿವರ್ತಿತರಾಗಲು ಒಪ್ಪದವರನ್ನು ತಲೆ ಛೇದಿಸಿ ಪಕ್ಕದ ಬಾವಿಯೊಳಗೆ ಎಸೆಯಲಾಗುತ್ತಿತ್ತು. ಮಲಪ್ಪುರಂ ಉತ್ತರ ಭಾಗದಲ್ಲಿ ಇದ್ದ ತೂವೂರ್ ಎಂಬ ಬಾವಿಗೆ ಮೋಪ್ಲಾಗಳು ೨೭ ಮಂದಿ ಸ್ಥಳೀಯರ ತಲೆಗಳನ್ನು ಗರಗಸದಿಂದ ಕತ್ತರಿಸಿ ಎಸೆದರು.

              ಸ್ತ್ರೀಯರನ್ನು ಹಿಡಿದು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡುತ್ತಿದ್ದರು. ನಂತರ ಎಲ್ಲರ ಎದುರೇ ಅತ್ಯಾಚಾರ. ಗರ್ಭಿಣಿಯರ ಗರ್ಭ ಸೀಳಿ ಮಗುವನ್ನು ಕತ್ತರಿಸಿ ಎಸೆಯುತ್ತಿದ್ದರು. ಗರ್ಭಿಣಿ, ಹಸುಳೆ, ವೃದ್ಧೆ ಎನ್ನದೇ ಎಲ್ಲರನ್ನು ಮಾನಭಂಗಗೊಳಿಸುತ್ತಿದ್ದರು.

               ಕಲ್ಲಿಕೋಟೆಯಲ್ಲಿ ಜಾಮೋರಿನ್ ದೊರೆಯ ನೇತೃತ್ವದಲ್ಲಿ ನಡೆದ ಸಮಾವೇಶ ಎಲ್ಲಾ ಕೃತ್ಯಗಳನ್ನು ವಿವರವಾಗಿ ದಾಖಲೆ ಮಾಡಿತು. ಕೇರಳ ಪ್ರದೇಶ ಕಾಂಗ್ರೆಸ್ ಕಾರ್ಯದರ್ಶಿ ಕೆ.ಪಿ. ಕೇಶವ ಮೆನನ್, ೧೯೨೧ರ ಸೆಪ್ಟೆಂಬರ್ ೭ರಂದು ಟೈಮ್ಸ್ ಆಫ್ ಇಂಡಿಯಾದಲ್ಲಿ ಪ್ರತ್ಯಕ್ಷದರ್ಶಿಯೊಬ್ಬರು ಬರೆದ ಪತ್ರ,...ಹೀಗೆ ಹತ್ತು ಹಲವು ವರದಿಗಳು ಮೋಪ್ಲಾಗಳ ಕೃತ್ಯಗಳನ್ನು ವರದಿ ಮಾಡಿದವು. ಆದಾಗ್ಯೂ ಗಾಂಧಿ ಪ್ರಣೀತ ಕಾಂಗ್ರೆಸ್ ಖಿಲಾಫತಿಗೆ ತನ್ನ ಬೆಂಬಲವನ್ನು ಹಿಂದೆ ತೆಗೆಯಲೇ ಇಲ್ಲ. ಸಂದರ್ಭದಲ್ಲಿ ಬ್ರಿಟಿಷ್ ರಕ್ಷಣಾ ಪಡೆಗಳು ಕಣಕ್ಕಿಳಿಯದಿದ್ದರೆ ಅದಾಗಲೇ ಕೇರಳ ಪಾಕಿಸ್ತಾನವಾಗಿ ಪರಿವರ್ತಿತವಾಗುತ್ತಿತ್ತು.
ಮೋಪ್ಲಾಗಳನ್ನು ಸಮರ್ಥಿಸಿದ ಗಾಂಧಿ:

              ಇಡೀ ದೇಶ ಮೋಪ್ಲಾ ಅತ್ಯಾಚಾರಕ್ಕೆ ಆತಂಕಗೊಂಡಿದ್ದರೆ, ಗಾಂಧಿ ಅದಾವುವೂ ತನಗೆ ತಿಳಿಯದೆಂದ. ಆಗ್ರಹಿಸಿ ಪ್ರಶ್ಣಿಸಿದಾಗ " ಮೋಪ್ಲಾಗಳು ತಮ್ಮ ಧಾರ್ಮಿಕಾದೇಶದಂತೆ ವರ್ತಿಸಿದ್ದಾರೆ" ಎಂದು ಅತ್ಯಾಚಾರಿಗಳನ್ನೇ ಸಮರ್ಥಿಸಿದ. ಆತನದೇ ಅಣಿಮುತ್ತುಗಳನ್ನು ಕೇಳಿ…
 "The brave and god fearing moplahs are fighting for the religion as understood by them by a method they feel their religion enjoins them to adopt"

"May be that all the sufferings of the hindus are the rewards of the in human sins they have committed for years."

ಗಾಂಧಿ "ವ್ಯಾಪಕ ಮತಾಂತರ ನಡೆದಿಲ್ಲ. ಕೇವಲ ಒಂದೇ ಒಂದು ಪ್ರಕರಣ ನಡೆದಿದೆ. " ಎಂದು "ಯಂಗ್ ಇಂಡಿಯಾ" ದಲ್ಲಿ ಬರೆದ.
"Dr. mahamud tells me that have been grossly exaggerated...The one case that was reported to him was ...non proven" ಗಾಂಧಿಯ ಹೇಳಿಕೆ ಕಾಂಗ್ರೆಸ್ ನಾಯಕರನ್ನೇ ದಿಗ್ಭ್ರಮೆಗೊಳಿಸಿತು. ದೌರ್ಜನ್ಯಗಳ ವರದಿಗಳೆಲ್ಲ ಉತ್ಪ್ರೇಕ್ಷಿತ ಎಂದು ಅದನ್ನು ತಳ್ಳಿ ಹಾಕುವ, ಸಕಲ ಪ್ರಯತ್ನವನ್ನೂ ಗಾಂಧಿ ಮಾಡಿದ.
                 "ಇಂಥಾ ಬಾಲಿಶ ಹೇಳಿಕೆಗಳನ್ನು ಕೊಡಬೇಡಿ" ಎಂದು ಗಾಂಧಿಗೆ ಹೇಳಿದ ತಪ್ಪಿಗೆ ಕೆ.ಪಿ. ಕೇಶವ ಮೆನನರ(ಕಲ್ಲಿ ಕೋಟೆಯ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ) ಮನೆಯ ಮೇಲೇ ಕಾಂಗ್ರೆಸ್ಸಿಗರು ಕಲ್ಲು ತೂರಿದರು. ಕಾಂಗ್ರೆಸ್ ತನಗೂ ಮೋಪ್ಲಾ ಗಲಭೆಗೂ ಸಂಬಂಧವಿಲ್ಲವೆಂದೂ, ಉತ್ಪ್ರೇಕ್ಷಿತ ವರದಿಗಳಿಂದ ವಿಚಲಿತರಾಗಿ ಮೋಪ್ಲಾಗಳು ಹಿಂಸಾಚಾರಕ್ಕಿಳಿದರೆಂದೂ ನಿರ್ಣಯ ಮಾಡಿತು. ಮದರಾಸ್ ಸರಕಾರದ ಅಧಿಕೃತ ದಾಖಲೆಯಲ್ಲಿ ಹಲವು ಸಾವಿರ ಮತಾಂತರ ಪ್ರಕರಣಗಳ ಅಧಿಕೃತ ವರದಿಗಳು ಇದ್ದಾಗ್ಯೂ ಗಾಂಧಿ ವರೆಗೆ ಅಂತಹ ಕೇವಲ ಪ್ರಕರಣಗಳು ನಡೆದಿವೆ ಎಂದ(೧೯೨೨ ಜನವರಿ). ಕಾಂಗ್ರೆಸ್ ಮಗುಮ್ಮಾಗಿ ಬೆಂಬಲಿಸಿತು.
                 ಸರ್ವೆಂಟ್ಸ್ ಆಫ್ ಸೊಸೈಟಿಯ ವರದಿಯಂತೆ ಮೋಪ್ಲಾಗಳಿಂದ ೧೦೦೦ ಹಿಂದೂಗಳ ಕಗ್ಗೊಲೆ, ೨೦೦೦೦ ಬಲವಂತದ ಮತಾಂತರಗಳು, ಹಲವು ಸಾವಿರ ಮಹಿಳೆಯರ ಅತ್ಯಾಚಾರ, ಜನರಿಂದ ಕೋಟಿಗೂ ಮಿಕ್ಕಿದ ಹಣದ ಲೂಟಿ ಆಗಿತ್ತು. ಎಡಬಿಡಂಗಿ ಕಮ್ಯೂನಿಷ್ಟರು "ಮೋಪ್ಲಾಗಳು ೧೧೦೦ ದೇವಾಲಯಗಳ ಪೈಕಿ ೧೦೦ ದೇವಾಲಯಗಳನ್ನು ಮಾತ್ರ ಧ್ವಂಸ ಮಾಡಿದರು. ೫೦೦ ಮಂದಿ ಮಾತ್ರ ಕೊಲೆಯಾದರು. ೨೫೦೦ ಮಂದಿ ಮಾತ್ರ ಮತಾಂತರಗೊಂಡರು" ಎಂಬ ತನ್ನ ಎಂದಿನ ಹಿಂದೂ ವಿರೋಧಿ ಮನಸ್ಥಿತಿಯ ವರದಿಗಳನ್ನೇ ತಯ್ಯಾರು ಮಾಡಿದರು.
             ದಂಗೆಗಳನ್ನು ತಹಬಂದಿಗೆ ತರಲು ಪೊಲೀಸ್ ಪಡೆಗಳಿಗೆ ಸಾಧ್ಯವಾಗದೇ ಸೈನಿಕ ತುಕಡಿಗಳನ್ನೇ ಕರೆಸಿಕೊಳ್ಳಲಾಯಿತು. ಹಂತದಲ್ಲಿ ಗೆರಿಲ್ಲಾ ಯುದ್ಧ ತಂತ್ರಕ್ಕೆ ಶರಣು ಹೋದ ಮೋಪ್ಲಾಗಳನ್ನು ನಿಯಂತ್ರಿಸಲು ಒಂದು ವಿಶೇಷ ಅನುಭವಿ ಪಡೆಯನ್ನೇ ತರಬೇತುಗೊಳಿಸಿ ನೇಮಿಸಲಾಯಿತು. ಹೀಗೆ ಏಳೆಂಟು ತಿಂಗಳುಗಳ ಪರ್ಯಂತ ಮೋಪ್ಲಾಗಳೊಂದಿಗೆ ಕಾದಾಡಿದ ಪಡೆ ದಂಗೆಯನ್ನು ನಿಯಂತ್ರಿಸಿತು.


ಶನಿವಾರ, ಏಪ್ರಿಲ್ 27, 2013

ಮೋಪಳಾ ಭಯೋತ್ಪಾದನೆ--ರಕ್ತಬೀಜಾಸುರನ ಸಂತತಿ: ಭಾಗ- ೨



ಅದು ದೇವರ ನಾಡೆಂದು ಕರೆಯಲ್ಪಡುತ್ತಿತ್ತು...ಆದರೆ ಅಂದಿನಿಂದ ದೆವ್ವಗಳ ನಾಡಾಗಿ ಬದಲಾಗುತ್ತಿದೆ...
ಮೋಪಳಾ ಭಯೋತ್ಪಾದನೆ--ರಕ್ತಬೀಜಾಸುರನ ಸಂತತಿ: ಭಾಗ- :
               ಜನರ ಮೇಲಿನ ಅತ್ಯಾಚಾರವನ್ನು ನಿವಾರಿಸಲು ಬಂದ ಪೊಲೀಸರನ್ನು ಕೊಚ್ಚಿ ಹಾಕುತ್ತಿದ್ದರು. " ಇಸ್ಲಾಮಿಗೆ ಮತಾಂತರಗೊಳ್ಳಿ ಇಲ್ಲವೇ ಸಾಯಲು ಸಿದ್ಧರಾಗಿ" ಎನ್ನುತ್ತಾ ಬಲಾತ್ಕಾರದ ಮತಾಂತರ, ಮಹಿಳೆಯರ ಅತ್ಯಾಚಾರ, ಹಿಂದೂಗಳ ಚರ್ಮ ಸುಲಿಯುವುದು, ಆಸ್ತಿಪಾಸ್ತಿ ಲೂಟಿ, ಕೊಲೆ,ಹಗಲು ದರೋಡೆ, ಸರಕಾರೀ ಖಜಾನೆಗಳ ದರೋಡೆ ಎಗ್ಗಿಲ್ಲದೆ ನಡೆದವು. ಮರಗಳ ಛೇದನ, ಸೇತುವೆಗಳ ಧ್ವಂಸ ಎಲ್ಲಾ ತಂತ್ರಗಳನ್ನು ಖಿಲಾಫತಿಗರು ಬಳಸಿದರು. ದೇವಾಲಯಗಳ ಲೂಟಿ, ವಿಗ್ರಹ ಭಂಜನೆಗಳು ಅಗಾಧ ಪ್ರಮಾಣದಲ್ಲಿ ನಡೆದವು.

                  ದಂಗೆಕೋರರಿಗೆ ಅಹಿಂಸೆ ಭೋಧಿಸಹೊರಟ ಮಂಜೇರಿಯ ಕೆ. ಮಾಧವನ್ ನಾಯರ್, ಎರ್ನಾಡಿನ ಎಂ.ಪಿ. ನಾರಾಯಣ ಮೆನನ್ ಮೊದಲಾದವರ ಪ್ರಯತ್ನಗಳು ವಿಫಲಗೊಂಡವು. "ನಾವೇನು ಮಾಡುತ್ತಿದ್ದೇವೆಂದು ನಮಗೆ ಗೊತ್ತು. ನಿಮ್ಮ ಉಪದೇಶ ನಮಗೆ ಬೇಕಾಗಿಲ್ಲ" ಎಂದರು ಮೋಪ್ಲಾಗಳು. ಇಷ್ಟೆಲ್ಲಾ ನಡೆದರೂ ಗಾಂಧಿಯ ಹೇಳಿಕೆ ನೋಡಿ- " I would gladly ask for the postponement of the swaraj activity if we could advance the interest of khilaphat"

                     1891ರಲ್ಲಿ ಎರ್ನಾಡ್, ವಳ್ಳುವನಾಡ್, ಪೊಣ್ಣನಿ ಮೂರು ತಾಲೂಕುಗಳಲ್ಲಿ ನೂರರಲ್ಲಿ ಎಪ್ಪತ್ತರಷ್ಟಿದ್ದ ಮಾಪಿಳ್ಳೆಗಳ ಸಂಖ್ಯೆ ಮೂರೇ ದಶಕಗಳಲ್ಲಿ ೮೫ ಪ್ರತಿಶತವನ್ನೂ ದಾಟಿತು. ಹಿಂದೂಗಳ ಸಂಖ್ಯೆ ೫೨೦೧೭ ಇದ್ದರೆ ಮಾಪ್ಪಿಳ್ಳೆಗಳ ಸಂಖ್ಯೆ ,೫೦,೫೩೨ ಆಗಿತ್ತು.  "ಶಸ್ತ್ರಾಸ್ತ್ರಗಳು, ಸರಂಜಾಮುಗಳು ಹಾಗೂ ಸೈನಿಕರನ್ನು ಹೊತ್ತ ಹಡಗುಗಳು ಭಾರತದತ್ತ ಹೊರಟಿವೆ. ಅವು ತಲುಪಿದೊದನೆ ಹಿಂದೂಗಳ ಮಾರಣ ಹೋಮ ಆದಂತೆ" ಎಂದು ಹೆದರಿಸಿ ಮತಾಂತರವನ್ನು ಮತ್ತಷ್ಟು ಹೆಚ್ಚಿಸಲಾಯಿತು. " ಇನ್ನು ಮುಂದೆ ನೀವು ಮಾಪಿಳ್ಳೆಗಳ ಹೆಸರುಗಳನ್ನು ಹೊಂದಬೇಕಾಗುತ್ತೆ" ಎಂದು ನಾಯರ್ ಮಹಿಳೆಯರಿಗೆ ಹೇಳಿ ಹೊಸ ಹೆಸರುಗಳನ್ನು ಲೆಡ್ಜರುಗಳಲ್ಲಿ ಬರೆದಿಡಲಾಗುತ್ತಿತ್ತು.

                 ಹಿಂದೂಗಳ ಮೇಲೆ ಆಕ್ರಮಣ ನಡೆಸುವ ಪ್ರವೃತ್ತಿ ಕೇರಳದ ಮುಸ್ಲಿಮರಲ್ಲಿ ದೀರ್ಘಕಾಲ ಮನೆ ಮಾಡಿದ್ದುದರಿಂದ ಗಾಂಧಿ ಹೊತ್ತಿಸಿದ ಕಿಡಿ ಉರಿದೆದ್ದು ನಂದಿಸದ ಜ್ವಾಲೆಯಾಗಿ ಅಸಂಘಟಿತ ಹಿಂದೂಗಳ ಮಾರಣ ಹೋಮ ಪ್ರಾರಂಭವಾಯಿತು. ಶೌರ್ಯಕ್ಕೆ ಹೆಸರಾಗಿದ್ದ ನಾಯರ್ ಸಮುದಾಯವನ್ನು ನಿಶ್ಯಸ್ತ್ರಗೊಳಿಸಿದ್ದ ಬ್ರಿಟಿಷರ ಕ್ರಮ ಮಾಪ್ಪಿಳ್ಳೆಗಳಿಗೆ ಲಾಭದಾಯಕವಾಯಿತು.

ಅದೇ ಸಮಯದಲ್ಲಿ ಕರ್ಣಾವತಿ(ಈಗ ಅಹ್ಮದಾಬಾದ್ ಆಗಿ ಮತಾಂತರಗೊಂಡಿದೆ)ಯಲ್ಲಿ ನಡೆದ ಮುಸ್ಲಿಮ್ ಲೀಗ್ ಅಧಿವೇಶನದ ಅಧ್ಯಕ್ಷ ಭಾಷಣದಲ್ಲಿ ಹಸರತ್ ಮೊಹಾನಿ ಮೋಪ್ಳಾ ದಂಗೆಯನ್ನು ಸಮರ್ಥಿಸುತ್ತಾ "ಹಿಂದೂಗಳು ಜಿಹಾದನ್ನು ಸ್ವೀಕರಿಸಿಲ್ಲ ಎಂದ ಮೇಲೆ ಅವರು ನಮ್ಮ ಶತ್ರುಗಳೇ. ಹಾಗಾಗಿ ಅವರ ಮೇಲಿನ ಹಲ್ಲೆ ಹಾಗೂ ಅತ್ಯಾಚಾರ ದೋಷವೆನಿಸುವುದಿಲ್ಲ" ಎಂದು ಬೊಬ್ಬಿರಿದ. ವಿಪರ್ಯಾಸವೆಂದರೆ ಖಿಲಾಫತಿಗೆ ಹೆಗಲು ಕೊಟ್ಟ ಮಹಾತ್ಮ(!) ಅದೇ ಸಭೆಯಲ್ಲಿದ್ದರೂ ತುಟಿ ಬಿಚ್ಚಲಿಲ್ಲ. ವ್ಯತಿರಿಕ್ತವಾಗಿ ಆನಿಬೆಸೆಂಟ್ ಮೋಪ್ಳಾ ದಂಗೆಯನ್ನು ಖಂಡಿಸುತ್ತಾ "ಮುಸ್ಲಿಮರ ಸ್ವಭಾವಗತ ಹಿಂಸಾ ಪ್ರವೃತ್ತಿಯೇ ದೌರ್ಜನ್ಯಗಳಿಗೆ ಕಾರಣ" ಎಂದು ಹಿಂದೂಗಳನ್ನು ಎಚ್ಚರಿಸಿದರು.
http://www.oocities.org/hindoo_humanist/mopla.html
ಕೊಲೆ-ಲೂಟಿ-ಅತ್ಯಾಚಾರ:

               ಪೊಣ್ಣನಿಯ ಸರಕಾರೀ ಕಾಲೇಜಿನ ಆಸುಪಾಸಿನಲ್ಲಿಯೇ ಖಿಲಾಫತಿಗರು ಲೂಟಿ ದಾಂಧಲೆ ನಡೆಸಿದರು. ಇಲ್ಲಿ ೬೭ ಪೊಲೀಸರು ಕೊಲೆಯಾದರು, ೧೫೫ ಮಂದಿ ಮಾರಣಾಂತಿಕವಾಗಿ ಗಾಯಗೊಂಡರು. ಮಂಜೇರಿ, ತಿರುರಂಗಾಡಿಗಳಲ್ಲಿ ಅಂಗಡಿಗಳನ್ನು ಸುಟ್ಟು ಹಾಕಿದರು. ಉಗ್ರ ಮತಪ್ರವರ್ತಕರಾಗಿದ್ದ ಮುಸ್ಲಿಂ ಭಯೋತ್ಪಾದಕರಿಗಂತೂ ಖಿಲಾಫತ್ ಆಂದೋಲನ ಸುಸಂಧಿಯಾಗಿ ಒದಗಿ ಬಂತು. ಇಂತಹವರೆಲ್ಲರೂ ಏಕಾಏಕಿ ಗಾಂಧಿ ಅನುಯಾಯಿಗಳಾಗಿ ತಮ್ಮ ಮತಾಂತರ, ಲೂಟಿ, ಮಾನಭಂಗವನ್ನು ಮತ್ತಷ್ಟು ನಿರ್ಭಿಡೆಯಿಂದ ಮಾಡತೊಡಗಿದರು.
                 ಅಲೀ ಮುಸಲಿಯಾರ್ ಎಂಬ ಮೌಲ್ವಿ ಏರ್ನಾಡ್, ತಿರುರಂಗಾಡಿಗಳಲ್ಲಿ ತಾನೇ ರಾಜನೆಂದು ಘೋಷಿಸಿಕೊಂಡು ಕಪ್ಪ ವಸೂಲು ಮಾಡತೊಡಗಿದ. ಉಗ್ರ ಮತಾಂತರ ಮಾಡುತ್ತಿದ್ದ ಕ್ರೂರ ಅತ್ಯಾಚಾರಿಯನ್ನು ಹಾಗೂ ಅವನ ಸಂಗಡಿಗರನ್ನು ಹಿಡಿದ ಪೊಲೀಸರು ಅವನಿಗೆ ಮರಣದಂಡನೆಯಾಗುವಂತೆ ಮಾಡಿ ಹಿಂದೂಗಳ ತುಸು ನೆಮ್ಮದಿಗೆ ಕಾರಣವಾದರು. ನೀಲಂಬೂರಿನಲ್ಲಿ ವಿ. ಕೆ. ಹಾಜಿ ಎಂಬಾತನ ಕ್ರೌರ್ಯ ಹೇಗಿತ್ತೆಂದರೆ ಅವನ ಹೆಸರು ಹೇಳಲೂ ಜನ ಹೆದರುತ್ತಿದ್ದರು. ಅಪಾರ ಶಸ್ತ್ರ ಸಂಗ್ರಹ ಮಾಡಿದ್ದ ಅವನು ತನ್ನ ಕೊಲೆ, ಲೂಟಿ, ಮಾನಭಂಗಗಳ ಸುದ್ದಿ ಮಂಜೇರಿ, ನೀಲಂಬೂರುಗಳಿಂದಾಚೆಗೆ ಹೋಗದಂತೆ ಎಚ್ಚರ ವಹಿಸಿದ್ದ. ಅವನನ್ನು ಬಂಧಿಸಿ ಮರಣದಂಡನೆ ವಿಧಿಸಲು ವಿಶೇಷ ಪೊಲೀಸ್ ಪಡೆಯನ್ನೇ ರಚಿಸ ಬೇಕಾಯಿತು. ಪಂದಲೂರಿನ ಹೆಡ್ ಕಾನ್ ಸ್ಟೇಬಲ್ ಹೈಡ್ರಾಸನನ್ನು ಅವನ ಪತ್ನಿ, ಮಕ್ಕಳ ಎದುರೇ ಕೊಚ್ಚಿ ಹಾಕಿದರು.
- ಮುಂದುವರಿಯುವುದು