ಪುಟಗಳು

ಆಜಾದ್ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ಆಜಾದ್ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಬುಧವಾರ, ಸೆಪ್ಟೆಂಬರ್ 28, 2016

ಯಾರು ಮಹಾತ್ಮ? ಭಾಗ- ೬

ಯಾರು ಮಹಾತ್ಮ?
ಭಾಗ- ೬

             ಶಿಷ್ಯನೊಬ್ಬ ಗಾಂಧಿಯವರ ಅಹಿಂಸೆಯ ಆಚರಣೆಯ ಬಗ್ಗೆ ಕೇಳಿದಾಗ ಅರವಿಂದರು ಗಾಂಧಿಯವರ ಅಹಿಂಸೆಯ ಟೊಳ್ಳುತನವನ್ನು ಬಯಲಿಗೆಳೆಯುತ್ತಾರೆ. "ಮನುಷ್ಯನು ಸತ್ಯಾಗ್ರಹ ಅಥವಾ ಅಹಿಂಸೆಯನ್ನು ಕೈಗೊಂಡಾಗ ಅವನ ಸ್ವಭಾವಕ್ಕೆ ಏನಾಗುತ್ತದೆಯೆಂಬುದನ್ನು ಗಾಂಧಿ ತಿಳಿದಿಲ್ಲವೆಂದು ನನಗನಿಸುತ್ತದೆ. ಗಾಂಧಿ ಅದರಿಂದ ಮನುಷ್ಯರು ಶುದ್ಧಗೊಳ್ಳುತ್ತಾರೆಂದು ಭಾವಿಸುತ್ತಾರೆ. ಆದರೆ ಮನುಷ್ಯರು ಯಾತನೆಗೊಳಗಾದಾಗ ಅಥವಾ ಯಾತನೆಯನ್ನು ಸ್ವ ಇಚ್ಛೆಯಿಂದ ಅನುಭವಿಸಿದಾಗ ಅವರ ಪ್ರಾಣಕೋಶ ಬಲಗೊಳ್ಳುತ್ತದೆ. ಈ ಚಳವಳಿಗಳು ಪ್ರಾಣಕೋಶವನ್ನಷ್ಟೇ ಬಾಧಿಸುತ್ತವೆ. ಯಾವಾಗ ದಬ್ಬಾಳಿಕೆ ನಡೆಸುವ ಶಕ್ತಿಯನ್ನು ವಿರೋಧಿಸಲು ಸಾಧ್ಯವಿಲ್ಲವೋ ಆಗ ಅದನ್ನು ಸಹಿಸಿ ಬವಣೆಯನ್ನು ಅನುಭವಿಸುತ್ತೇನೆ ಎನ್ನುತ್ತೀಯಾ. ಆದರೆ ಈ ಸಹನೆ ಪ್ರಾಣಿಕವಾಗಿದ್ದು ಹೀಗೆ ಯಾತನೆಯುಂಡ ಮನುಷ್ಯ ತನಗೆ ಅಧಿಕಾರ ದೊರೆತಾಗ ಅತ್ಯಂತ ಹೀನ ಶೋಷಕನಾಗುತ್ತಾನೆ. ನಾವು ಹಿಂಸಾಪ್ರವೃತ್ತಿಯನ್ನಷ್ಟೇ ಪರಿವರ್ತಿಸಲು ಸಾಧ್ಯ. ಆದರೆ ಸತ್ಯಾಗ್ರಹದ ಆಚರಣೆಯಿಂದ ಅದನ್ನು ಪರಿವರ್ತಿಸಲಾಗದು. ಈ ರೀತಿಯ ಒಮ್ಮುಖವಾದ ತತ್ವಗಳಿಂದ ಬೂಟಾಟಿಕೆ, ಅಪ್ರಾಮಾಣಿಕತೆಗಳೇ ಮೇಲುಗೈ ಸಾಧಿಸಿ ಶುದ್ಧೀಕರಣ ಸಾಧ್ಯವಾಗದು. ನಾನು ಹೇಳಿದಂತೆ ಹಿಂಸಾಪ್ರವೃತ್ತಿಯ ಪರಿವರ್ತನೆಯಿಂದ ಶುದ್ಧೀಕರಣ ಸಾಧ್ಯ. ಪ್ರಾಚೀನ ಭಾರತದಲ್ಲಿದ್ದ ವ್ಯವಸ್ಥೆಯನ್ನೇ ನೋಡು.ಹೋರಾಟದ ಮನೋಭಾವದವನು ಕ್ಷತ್ರಿಯನಾಗುತ್ತಿದ್ದ. ಮತ್ತು ಆ ಕ್ಷಾತ್ರ ಪ್ರವೃತ್ತಿಯು ಸಾಧಾರಣ ಪ್ರಾಣಿಕ ಪ್ರಭಾವದಿಂದ ಮೇಲೇರುವಂತೆ ನೋಡಿಕೊಳ್ಳಲಾಗುತ್ತಿತ್ತು. ಅದರ ಗುರಿ ಆಧ್ಯಾತ್ಮೀಕರಣವಾಗಿತ್ತು. ಈ ವ್ಯವಸ್ಥೆ ಇಂದಿನ ಸಾತ್ವಿಕ ಪ್ರತಿರೋಧ ಸಾಧಿಸಲಾಗದ್ದನ್ನು, ಸಾಧಿಸಲಾರದ್ದನ್ನು ಸಾಧಿಸುವಲ್ಲಿ ಯಶಸ್ವಿಯಾಯಿತು. ಯಾವ ದಬ್ಬಾಳಿಕೆಯನ್ನೂ ಸಹಿಸದೆ ಹೋರಾಡುವವನೇ ಕ್ಷತ್ರಿಯ. ಆತ ಯಾರನ್ನೂ ಶೋಷಿಸಲಾರ." (ಇಂಡಿಯಾಸ್ ರೀಬರ್ತ್, ಶ್ರೀ ಅರಬಿಂದೋ) ಅಹಿಂಸೆಯ ಬಗೆಗಿನ ಅರವಿಂದರ ಈ ವಿಶ್ಲೇಷಣೆಯನ್ನು ಸೂಕ್ಷ್ಮವಾಗಿ ಅವಲೋಕಿಸಿದಾಗಲೇ ಅದರ ಗಟ್ಟಿತನದ ಅರಿವಾದೀತು. ಗಾಂಧಿ ಪ್ರತಿಪಾದಿಸಿದ ಅಹಿಂಸೆಯನ್ನು ಪಾಲಿಸಿದವ ಅಧಿಕಾರ ಸಿಕ್ಕಾಗ ಹೀನಶೊಷಕನಾಗುತ್ತಾನೆ ಎಂದ ಅರವಿಂದರ ಮಾತಿಗೆ ಪ್ರತ್ಯಕ್ಷ ನಿದರ್ಶನ ಗಾಂಧಿ. ಅವರು ಕಾಂಗ್ರೆಸ್ಸಿನ ಸರ್ವಾಧಿಕಾರಿಯಾಗಿದ್ದಾಗ ಹೇಗೆ ಸುಭಾಷರು ಎರಡನೇ ಬಾರಿ ಅಧ್ಯಕ್ಷರಾಗುವುದನ್ನು ತಡೆದರು ಎನ್ನುವುದನ್ನು ನೆನಪಿಸಿಕೊಳ್ಳಿ. ಅದೇ ರೀತಿ "ಕಾಂಗ್ರೆಸ್ಸಿನಲ್ಲಿ ಅವರ ಮಾತೇ ಅಂತಿಮವಾಗಿತ್ತು" ಎನ್ನುವುದನ್ನು ಸೂಕ್ಷ್ಮವಾಗಿ, ಆಳವಾಗಿ ನೋಡಿದರೆ ಸಾಕು ಅರವಿಂದರ ಮಾತಿನ ಹೊಳಹು ಅಲ್ಲೇ ಗೋಚರಿಸುತ್ತದೆ.

            ಸತ್ಯಾಗ್ರಹಿಯು ತಾನು ಇತರರ ಮೇಲೆ ತರುವ ಒತ್ತಡದ ಬಗ್ಗೆ ತನಗೆ ಕಾಳಜಿಯಿಲ್ಲವೆಂದು ಹೇಳುವುದು ಕೂಡಾ ಹಿಂಸೆಯೇ. ನಿಜವಾದ ಅಹಿಂಸೆಯು ಬಾಹ್ಯ ಕ್ರಿಯೆಯಲ್ಲಿ ಅಥವಾ ಕ್ರಿಯೆಯಿಂದ ತಪ್ಪಿಸಿಕೊಳ್ಳುವಲ್ಲಿ ಇರದ ಒಂದು ಮನಃಸ್ಥಿತಿ. ಆಂತರಿಕ ಅಸ್ತಿತ್ವದಲ್ಲಿ ಯಾವುದೇ ಒತ್ತಡವು ಅಹಂಸೆಯ ಉಲ್ಲಂಘನೆಯೇ. ಅಹಮದಾಬಾದ್ ಗಿರಣಿಗಳ ಮುಷ್ಕರದಲ್ಲಿ ಗಿರಣಿಗಳ ಮಾಲಿಕರು ಹಾಗೂ ಕಾರ್ಮಿಕರ ನಡುವಿನ ವಿವಾದವನ್ನು ಬಗೆಹರಿಸಲು ಗಾಂಧಿಯವರು ಉಪವಾಸ ಕೈಗೊಂಡರು. ಗಿರಣಿಯ ಮಾಲಿಕರಿಗೆ ಗಾಂಧಿಯ ನಿಲುವು ಅರ್ಥವೇ ಆಗಲಿಲ್ಲ. ಕಾರ್ಮಿಕರ ಸಾವಿಗೆ ಜವಾಬ್ದಾರರಾಗಲು ಅವರು ಒಪ್ಪಲಿಲ್ಲ. ಬದಲಾಗಿ ಪರಿಹಾರ ವಿತರಿಸಲು ಒಪ್ಪಿಕೊಂಡರು. ಎಲ್ಲವೂ ಯಥಾಸ್ಥಿತಿಗೆ ಮರಳಿದ ಕೂಡಲೆ ಮಾಲಿಕರದ್ದು ಅದೇ ಹಳೆಯ ರಾಗ! ಅತ್ತ ಕಾರ್ಮಿಕರ ಸಮಸ್ಯೆಯೂ ಬಗೆಹರಿಯಲಿಲ್ಲ. ಇತ್ತ ಮಾಲೀಕನೂ ಬದಲಾಗಲಿಲ್ಲ. ಮೃತರಾದವರ ಕುಟುಂಬಕ್ಕೇನೋ ಒಂದಷ್ಟು ಪರಿಹಾರ ಸಿಕ್ಕಿತಷ್ಟೇ! ಇದು ಗಾಂಧಿಯವರ ಟೊಳ್ಳು ಅಹಿಂಸಾ ಸತ್ಯಾಗ್ರಹದ ಫಲಶ್ರುತಿ. ದಕ್ಷಿಣಾ ಆಫ್ರಿಕಾದಲ್ಲಿ ಆದುದು ಇದೇ. ಇಂತಹ ಪ್ರತಿರೋಧದಿಂದ ಅವರು ಕೆಲವು ರಿಯಾಯಿತಿಗಳನ್ನು ಪಡೆದದ್ದು ನಿಜ. ಆದರೆ ಅವರು ಭಾರತಕ್ಕೆ ಮರಳಿದ ನಂತರ ಅಲ್ಲಿನ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿತು. ಹಾಂ ಇಲ್ಲಿ ತಾವು ಮರಳಿದ ಬಳಿಕ ಪರಿಸ್ಥಿತಿ ಮತ್ತಷ್ಟು ಗಂಭೀರಗೊಂಡರೆ ಗಾಂಧಿಯದ್ದೇನು ತಪ್ಪು ಎಂದು ವಾದಿಸಬಹುದು. ಗಾಂಧಿಯನ್ನು ಸಾಮಾನ್ಯ ಮನುಷ್ಯ ಎಂದು ಬೆಂಬಲಿಗರು ನೋಡುತ್ತಿದ್ದರೆ ಆಗ ಈ ಪ್ರಶ್ನೆ ಸರಿ. ಆದರೆ ಗಾಂಧಿಯನ್ನು ಮಹಾತ್ಮ ಪಟ್ಟಕ್ಕೆ ಏರಿಸಿರುವುದರಿಂದಲೇ ಈ ತರ್ಕ-ಲೇಖನಮಾಲೆ ಹುಟ್ಟಿಕೊಂಡಿದುದು. ನಿಜಾರ್ಥದಲ್ಲಿ ಮಹಾತ್ಮನಿದ್ದಿದ್ದರೆ ಈ ಸಮಸ್ಯೆಗಳು ಸಂಪೂರ್ಣವಾಗಿ ಬಗೆ ಹರಿಯಬೇಕಿತ್ತು. ನಿಜವಾದ ಮಹಾತ್ಮನಾಗಿದ್ದರೆ ಶತ್ರುತ್ವದ ಭಾವನೆಯೇ ನಶಿಸುತ್ತಿತ್ತು. ಆದರೆ ಮೇಲಿನ ಎರಡೂ ಸಂದರ್ಭಗಳಲ್ಲಿ ಅಹಿಂಸೆ ತೋರಿಕೆಯ ವಸ್ತುವಾಗಿಬಿಟ್ಟಿತು. ಸಮಸ್ಯೆಗಳು ಮತ್ತಷ್ತು ಹೆಚ್ಚಾದವು.

           1924ರಲ್ಲಿ ಗಾಂಧಿ ತಮ್ಮ ಮಗ ದೇವದಾಸನನ್ನು ಅರವಿಂದರನ್ನು ಕಾಣಲು ಕಳುಹಿಸಿದರು. ಆತ ಅಹಿಂಸೆಯ ಬಗ್ಗೆ ಅರವಿಂದರ ದೃಷ್ಟಿಕೋನವನ್ನು ಕೇಳಿದಾಗ "ಅಪ್ಘನ್ನರು ಭಾರತವನ್ನು ಆಕ್ರಮಿಸಿದರೆ ಅದನ್ನು ಅಹಿಂಸೆಯಿಂದ ಹೇಗೆ ಎದುರಿಸುವಿರಿ" ಎಂದು ಮರುಪ್ರಶ್ನಿಸಿದರು. ಗಾಂಧಿಯ ಪ್ರತಿನಿಧಿಯಾಗಿ ಬಂದಿದ್ದ ದೇವದಾಸ ಅದಕ್ಕೆ ಉತ್ತರಿಸಲಿಲ್ಲ. ಅಲ್ಲ ಸಾಕ್ಷಾತ್ ಗಾಂಧಿಯೇ ಇರುತ್ತಿದ್ದರೂ ಅದಕ್ಕೆ ಉತ್ತರಿಸುತ್ತಿರಲಿಲ್ಲ ಬಿಡಿ.

             ಮಹಾಯುದ್ಧದ ಸಂದರ್ಭದಲ್ಲಿ ಗಾಂಧಿ ಬ್ರಿಟಿಷರನ್ನುದ್ದೇಶಿಸಿ ಬರೆದ ಬಹಿರಂಗ ಪತ್ರದಲ್ಲಿ. "ನಾನು ಕದನ ವಿರಾಮಕ್ಕೆ ಕೋರಿಕೊಳ್ಳುತ್ತೇನೆ. ನೀವು ನಾಝಿವಾದವನ್ನು ಮುಗಿಸಬೇಕೆಂದಿರುವಿರಿ. ನೀವು ನಾಝಿವಾದವನ್ನು ಅಹಿಂಸಾತ್ಮಕ ಅಸ್ತ್ರಗಳಿಂದ ಎದುರಿಸಬೇಕೆಂದು ನಾನು ಬಯಸುತ್ತೇನೆ. ನೀವು ನಿಮ್ಮದೆಂದು ಬಗೆದಿರುವ ನಿಮ್ಮೆಲ್ಲಾ ದೇಶಗಳನ್ನು ತಮ್ಮ ಅಧೀನಕ್ಕೆ ತೆಗೆದುಕೊಳ್ಳಲು ಹಿಟ್ಲರನನ್ನು ಆಹ್ವಾನಿಸಿ. ಅವರು ನಿಮ್ಮ ಅನೇಕ ಸುಂದರ ದ್ವೀಪ - ಕಟ್ಟಡಗಳನ್ನು ವಶಪಡಿಸಿಕೊಳ್ಳಲಿ. ಇವೆಲ್ಲವನ್ನು ಕೊಟ್ಟರೂ ನಿಮ್ಮ ಹೃದಯ ಮನಸ್ಸು ನಿಮ್ಮದಾಗುವುದು"(ಅಮೃತಬಜಾರ್ ಪತ್ರಿಕೆ, ಜುಲೈ 14, 1940). ಹ್ಹ..ಹ್ಹ ಹಿಂಸೆಯನ್ನು ಬಗ್ಗುವುದರ ಮೂಲಕ ವಿರೋಧಿಸಿ ಎನ್ನುವ ಸಲಹೆ...! ಆದರೆ ಬ್ರಿಟಿಷರು ಇದಕ್ಯಾವ ಕಿಮ್ಮತ್ತೂ ಕೊಡಲಿಲ್ಲ ಎನ್ನುವುದು ಬೇರೆ ಮಾತು! ಮಿತ್ರಪಕ್ಷಗಳು ನಾಝಿಗಳನ್ನು ಬಗ್ಗುಬಡಿದವು.

                 ತಪ್ಪಾಗಿ ಗ್ರಹಿಸಿದ ಗುರಿ, ಅದನ್ನು ಈಡೇರಿಸಲು ನಿಷ್ಕಪಟವಲ್ಲದ, ಮನಃಪೂರ್ವಕವಾಗಿಲ್ಲದ ಸೂಕ್ತವಿಧಾನಗಳನ್ನು ಹೊಂದಿರುವ ಕಾಂಗ್ರೆಸ್ ಒಕ್ಕಣ್ಣರಿಂದ ನಡೆಸಲ್ಪಡುತ್ತಿದೆ ಎಂದಿದ್ದರು ಅರವಿಂದರು. ಗಾಂಧಿಯ ಬಗ್ಗೆ ತಮ್ಮ ನಿಲುವುಗಳನ್ನು ಅರವಿಂದರು ವ್ಯಕ್ತಪಡಿಸಿದ್ದಾರೆ. "ಗಾಂಧಿಯನ್ನು ಕ್ರಿಶ್ಚಿಯನ್ನರಿಗಿಂತ ಹೆಚ್ಚು ಕ್ರಿಶ್ಚಿಯನ್ ಎಂದು ಹಲವು ಯೂರೋಪಿಯನ್ನರು ಹೇಳಿದ್ದರು. ಕೆಲವರಂತೂ "ಆಧುನಿಕ ಕ್ರಿಸ್ತ" ಎನ್ನುವ ಬಿರುದನ್ನೇ ಕೊಟ್ಟಿದ್ದರು. ಇದು ಸಂಪೂರ್ಣ ಸುಳ್ಳೇನೂ ಅಲ್ಲ. ಗಾಂಧಿಯವರ ಉಪದೇಶಗಳು ಕ್ರಿಶ್ಚಿಯನ್ ಮತದಿಂದ ಎರವಲು ಪಡೆದುದಾಗಿತ್ತು. ಅವರ ವೇಷ ಭಾರತೀಯವಾಗಿದ್ದರೂ ಅಂತಃಸತ್ವ ಕ್ರೈಸ್ತಮತದ್ದೇ ಆಗಿತ್ತು. ಅವರು ಕ್ರಿಸ್ತ ಆಗಿರಲಿಕ್ಕಿಲ್ಲ, ಆದರೆ ಯಾವ ಲೆಕ್ಕದಲ್ಲಿ ನೋಡಿದರೂ ಆ ಪ್ರೇರಣೆಯ ಮುಂದುವರಿದ ಭಾಗವೇ ಆಗಿದ್ದರು. ಟಾಲ್ ಸ್ಟಾಯ್, ಬೈಬಲ್ ನಿಂದ ಗಾಢ ಪ್ರಭಾವಕ್ಕೆ ಒಳಗಾಗಿರುವ ಗಾಂಧಿಯವರ ವ್ಯಾಖ್ಯಾನಗಳಲ್ಲೂ ಈ ಪ್ರಭಾವ ಎದ್ದು ಕಾಣುತ್ತದೆ. ಅವರ ಬೋಧನೆ, ಸಿದ್ಧಾಂತಗಳಲ್ಲಿ ಜೈನ ಧರ್ಮದ ಛಾಯೆಯಿದೆ. ಬಹಳಷ್ಟು ಸುಶಿಕ್ಷಿತರು ಗಾಂಧಿಯವರನ್ನು ಆಧ್ಯಾತ್ಮಿಕ ವ್ಯಕ್ತಿ ಎಂದು ಕರೆಯುತ್ತಾರೆ. ಆದರೆ ಅವರು ಬೋಧಿಸುವುದು ಭಾರತೀಯ ಆಧ್ಯಾತ್ಮವಲ್ಲ. ರಷ್ಯಾದ ಕ್ರೈಸ್ತ ಮತದಿಂದ ಎರವಲು ಪಡೆದ ಅಹಿಂಸೆ, ಸೈರಣೆ, ವೇದನೆ ಇತ್ಯಾದಿಗಳನ್ನು. ಗಾಂಧಿಯವರ ವ್ಯಕ್ತಿತ್ವ ಅತ್ಯಂತ ನೀರಸ. ಬೌದ್ಧಿಕ ತೀವ್ರತೆ, ಸಂಕಲ್ಪಶಕ್ತಿ ಇದ್ದರೂ ಅವರ ವ್ಯಕ್ತಿತ್ವ ರಷ್ಯನ್ನರಿಗಿಂತಲೂ ನೀರಸ. ಗಾಂಧಿಯವರ ಚಳುವಳಿ ಆರಂಭವಾದಾಗಲೇ ಅದು ಅಭಾಸಕ್ಕೆ ಅಥವಾ ದೊಡ್ಡ ಗೊಂದಲಕ್ಕೆ ಗುರಿಯಾಗುತ್ತದೆಯಂದು ನಾನು ಹೇಳಿದ್ದೆ. ಅದು ಎರಡಕ್ಕೂ ಗುರಿಯಾಗಿದೆ.

              ಎಲ್ಲಿಯವರೆಗೆ ನೀವು ಸದ್ಗುಣ ಸಂಪನ್ನರಾಗಿರಬೇಕಾಗುತ್ತದೋ ಅಲ್ಲಿಯವರೆಗೆ ಶುದ್ಧ ಆಧ್ಯಾತ್ಮಿಕ ಉನ್ನತಿ ಸಾಧಿಸಲು ಸಾಧ್ಯವಿಲ್ಲ. ಅಲ್ಲಿ ಕ್ರಿಯೆಯು ನೈತಿಕವೋ ಅಲ್ಲವೋ ಎಂದು ಚಿಂತಿಸಬೇಕಿಲ್ಲ. ಜನರಿಗೆ ನೀವು ನೈತಿಕತೆಯನ್ನು ಮೀರಿ ಹೋಗಿ ಎಂದಾಗ ಅವರು ಅದು ಒಳಿತು ಮತ್ತು ಕೆಡುಕುಗಳೆರಡರ ಕೆಳಗೆ ಕುಸಿಯಲು ಹೇಳುತ್ತಿದ್ದೀರಿ ಎಂದು ಭಾವಿಸುತ್ತಾರೆ. ಆದರೆ ಅದು ಅಪಾರ್ಥ. ನೈತಿಕತೆಯಿಂದ ನೀವು ಮಾನವರಾಗಬಹುದು. ಆದರೆ ಮಾನವತೆಯನ್ನು ಮೀರಿ ಹೋಗಲಾಗುವುದಿಲ್ಲ. ಕ್ರಿಶ್ಚಿಯನ್ನರಂತೆ ಜನರು ಯಾವಾಗಲೂ ನೈತಿಕತೆ ಮತ್ತು ಆಧ್ಯಾತ್ಮಿಕತೆ ನಡುವೆ ಗೊಂದಲ ಮಾಡಿಕೊಳ್ಳುತ್ತಾರೆ. ಕ್ರಿಶ್ಚಿಯನ್ನರಿಗೆ ನೈತಿಕತೆ ಹಾಗೂ ಆಧ್ಯಾತ್ಮಿಕತೆಯ ನಡುವೆ ವ್ಯತ್ಯಾಸವಿರುವುದಿಲ್ಲ. ಉದಾಹರಣೆಗೆ ಗಾಂಧಿಯವರು ಘೋಷಿಸಿರುವ ಉಪವಾಸವನ್ನೇ ತೆಗೆದುಕೊಳ್ಳಿ. ಪಾಪಮಾರ್ಜನೆಗಾಗಿ ಇರುವ ಕ್ರೈಸ್ತ ಮತೀಯರ ಕಲ್ಪನೆ ಅದು. ಅದಕ್ಕೆ ನೀಡಲಾದ ಬೇರೆಲ್ಲಾ ಕಾರಣಗಳು ಅದನ್ನು ಹಾಸ್ಯಾಸ್ಪದವನ್ನಾಗಿಸುತ್ತವೆ. ಭಾರತೀಯ ಸಂಸ್ಕೃತಿಗೆ ನೈತಿಕತೆಯ ಮೌಲ್ಯವೂ ಗೊತ್ತಿತ್ತು. ಅದರ ಮಿತಿಗಳೂ ತಿಳಿದಿದ್ದವು. ಉಪನಿಷತ್ತುಗಳು ಮತ್ತು ಗೀತೆ ನೈತಿಕತೆಯನ್ನು ಮೀರಿ ಹೋಗುವ ಆದರ್ಶಳಿಂದ ತುಂಬಿವೆ."(ಇಂಡಿಯಾಸ್ ರೀಬರ್ತ್- ಶ್ರೀ ಅರವಿಂದೋ)

ಗುರುವಾರ, ಸೆಪ್ಟೆಂಬರ್ 22, 2016

ಯಾರು ಮಹಾತ್ಮ? ಭಾಗ- ೫

ಯಾರು ಮಹಾತ್ಮ? 

ಭಾಗ- ೫


               1942ರ ಆಗಸ್ಟ್ 8ರಂದು ಮಧ್ಯರಾತ್ರಿ ಬಾಂಬೆ ಮೀಟಿಂಗ್ ಹಾಲಿನಲ್ಲಿ ಒಂದಷ್ಟು ಜನ ಒಟ್ಟು ಸೇರಿದ್ದರು. ಎಂದಿನ ಶೈಲಿಯಲ್ಲಿ ತುಂಡು ಬಟ್ಟೆ ತೊಟ್ಟು ಬಂದ ಫಕೀರನೊಬ್ಬ ಉದ್ರಿಕ್ತಗೊಂಡು ಭಾಷಣ ಮಾಡಲಾರಂಭಿಸಿದ. "ಈ ಕ್ಷಣವೇ ನನಗೆ ಸ್ವಾತಂತ್ರ್ಯ ಬೇಕು. ಇಂದೇ ಈ ರಾತ್ರಿಯೇ. ಸಾಧ್ಯವಾದರೆ ರಾತ್ರಿ ಕಳೆದು ಬೆಳಗಾಗುವುದರ ಒಳಗೆಯೇ" ಎಂದು ಘೋಷಣೆ ಮಾಡಿಬಿಟ್ಟ. ಬೆಂಬಲಿಗರು ಉಘೇ ಉಘೇ ಎಂದರು. "ಇಲ್ಲೊಂದು ಸಂಕ್ಷಿಪ್ತ ಮಂತ್ರವಿದೆ. ಮಾಡು ಇಲ್ಲವೇ ಮಡಿ. ನಾವು ಭಾರತವನ್ನು ಸ್ವತಂತ್ರಗೊಳಿಸಬೇಕು. ಇಲ್ಲವಾದಲ್ಲಿ ಈ ಪ್ರಯತ್ನದಲ್ಲಿ ಪ್ರಾಣಾರ್ಪಣೆ ಮಾಡಬೇಕು. ನಮ್ಮ ಗುಲಾಮಗಿರಿ ದೀರ್ಘಕಾಲದವರೆಗೆ ಮುಂದುವರಿಯುವುದನ್ನು ನೋಡಲು ನಾವು ಇರಬಾರದು." ಬೆಳಗಾಗುವುದರೊಳಗೆ ಆತ ಪಡೆದದ್ದು ಸ್ವಾತಂತ್ರ್ಯವಲ್ಲ ಬದಲಿಗೆ ಬ್ರಿಟಿಷ್ ಕಾರಾಗ್ರಹಕ್ಕೆ ಮತ್ತೊಂದು ಆಮಂತ್ರಣ! ಆತ ಬೇರಾರು ಅಲ್ಲ ಮೋಹನದಾಸ ಕರಮಚಂದ ಗಾಂಧಿ!


                 ಹೀಗೆ "ಮಾಡು ಇಲ್ಲವೇ ಮಡಿ" ಹೋರಾಟಕ್ಕೆ "ಮಾಡುವುದೇನು" ಎನ್ನುವುದರ ಸ್ಪಷ್ಟತೆಯೇ ಇರಲಿಲ್ಲ. ಈಗ ಪ್ರಚಾರಕ್ಕೋಸ್ಕರ ಕೆಲ ಸಂಘಟನೆಗಳು ಮಾಡುವ ಪ್ರತಿಭಟನೆ-ಮುಷ್ಕರಗಳಂತೆ ಹತ್ತರಲ್ಲಿ ಹನ್ನೊಂದು ಎನ್ನುವಂತೆ! ಯಾರು, ಏನು, ಎಲ್ಲಿ, ಎತ್ತ ಎನ್ನುವ ಸಂಬಂಧವೇ ಇಲ್ಲದೇ ಮಾತು ಓತಪ್ರೋತವಾಗಿ ಹರಿದಿತ್ತು. ಜನ ಗುಂಪಿನಲ್ಲಿ ಗೋವಿಂದ ಎಂದಿದ್ದರು. ಯಾವುದೇ ರೂಪುರೇಷೆಗಳಿಲ್ಲದೆ ಪರಿಣಾಮದ ಸ್ಪಷ್ಟತೆಯೂ ಇಲ್ಲದೆ ಸುಸಜ್ಜಿತ ಸಂಘಟನೆಯೂ ಇಲ್ಲದೆ ಘೋಷಣೆ ಮಾಡಿಯಾಗಿತ್ತು. ಬ್ರಿಟಿಷರು ಎಗರಾಡಿದವರನ್ನು ಜೈಲಿಗೆ ತಳ್ಳಿ ಮೂರೇ ವಾರಗಳಲ್ಲಿ ಪರಿಸ್ಥಿತಿಯನ್ನು ತಮ್ಮ ಹತೋಟಿಗೆ ತಂದುಕೊಂಡರು. ಈ ನಡುವೆ ಗಾಂಧಿಯ ತಂತ್ರವನ್ನೇ ಉಪಯೋಗಿಸಿಕೊಂಡು ಆಟವಾಡಿದ ಮುಸ್ಲಿಂ ಲೀಗ್ ಮಹಾಯುದ್ಧದಲ್ಲಿ ಬ್ರಿಟಿಷರ ಜೊತೆ ಸೇರಿ ತನಗೆ ಬೇಕಾದುದನ್ನು ಪಡೆದುಕೊಂಡಿತು!


              "ಕೊಲ್ಲುವುದು ಹಿಂಸೆ, ಕೊಲ್ಲಲ್ಪಡುವುದು ಅಹಿಂಸೆ" ಇದೇ ಗಾಂಧಿಯ ಅಹಿಂಸಾ ಸಿದ್ಧಾಂತ. ಹಿಂದೂಗಳು ಮುಸ್ಲಿಮರನ್ನು ಕೊಲ್ಲುವುದು ಹಿಂಸೆ. ಅದೇ, ಹಿಂದೂಗಳು ಮುಸ್ಲಿಮರಿಂದ ಹತ್ಯೆಗೀಡಾದರೆ ಅದು ಅಹಿಂಸೆ. ಗಾಂಧಿ ಬಣ್ಣಿಸಿದ್ದೇ ಹಾಗೆ... "ಹಿಂದೂಗಳು ಪುಕ್ಕಲರು, ಮುಸ್ಲಿಮರು ಭಯಪಡಿಸುವವರು". ನಿಜವಾದ ಅಹಿಂಸೆಯನ್ನು ಸಾಧಿಸಿದವನ ಎದುರಲ್ಲಿ ಹುಲಿ ಮತ್ತು ಆಡು ಪರಸ್ಪರ ಸ್ನೇಹದಿಂದ ಬಾಳುತ್ತವೆ. ವಾಲ್ಮೀಕಿ ಮಹರ್ಷಿಯ ಆಶ್ರಮದಲ್ಲಿ ವ್ಯಾಘ್ರ-ಅಜಗಳೆರಡು ಪರಸ್ಪರರ ಜೊತೆ ಆಡುತ್ತಿದ್ದವಂತೆ. ಭಗವಾನ್ ರಮಣ ಮಹರ್ಷಿಗಳ ಆಶ್ರಮದಲ್ಲಿ ಹಾವು ಹೆಡೆಯೆತ್ತಿ ನರ್ತಿಸುವಾಗ ನವಿಲು ತನ್ನ ತುರಾಯಿ ಪ್ರದರ್ಶಿಸುತ್ತಾ ಆಡುತ್ತಿತ್ತು. ಅಹಿಂಸೆಯ ಶಕ್ತಿ ಅದು.  "ನಿಜವಾದ ಅಹಿಂಸಾ ಸಾಧಕನ ಶಕ್ತಿ ಅದು!" ಆದರೆ ಗಾಂಧಿ ತನ್ನವರಿಗೆ ಅಹಿಂಸೆಯನ್ನು ಬೋಧಿಸುತ್ತಾ ಇದ್ದಾಗಲೇ ಅವರ ಕಣ್ಣೆದುರೇ ಸಾವಿರಾರು ಹಿಂದೂಗಳು ಮುಸ್ಲಿಮರಿಂದ ಹತರಾದರು. ಅದನ್ನು ನೋಡಿಯೂ ಗಾಂಧಿ ತನ್ನ ಅರ್ಥಹೀನ ಅಹಿಂಸೆಯನ್ನು ಬೋಧಿಸುತ್ತಾ ಕುಳಿತರು. ಅಹಿಂಸಾ ವ್ಯಕ್ತಿಗಳ ಸಾನ್ನಿಧ್ಯದಲ್ಲಿ ಹಿಂಸೆ ಮರೆತು ಅಹಿಂಸೆಯೇ ನೆಲೆಯಾಗುತ್ತದೆ ಆದರೆ ಗಾಂಧಿ ಎನ್ನುವ ಅಹಿಂಸಾ ಸಾಧಕನ(?) ಎದುರು ಹಾಗಾಗಲಿಲ್ಲ. ಎರಡರಲ್ಲಿ ಒಂದು ಮಾತ್ರ ಸತ್ಯವಾಗಲು ಸಾಧ್ಯ. ಮೊದಲನೆಯದಕ್ಕೆ ಸಹಸ್ರ ಸಹಸ್ರ ನಿದರ್ಶನಗಳಿದ್ದು, ಅದನ್ನು ಜಗತ್ತೇ ಒಪ್ಪಿಕೊಂಡಿದೆ. ಹಾಗಾದರೆ ಗಾಂಧಿಯ ಅಹಿಂಸೆ ಎನ್ನುವುದರಲ್ಲೇ ಏನೋ ದೋಷವಿರಲೇಬೇಕು. ಗ್ ಈ ಎರಡು ರೀತಿಯ ಅಹಿಂಸೆಗಳಲ್ಲಿನ ವ್ಯತ್ಯಾಸವನ್ನು ಅರಿತವರಿಗೆ ಗಾಂಧಿಯ ಅಹಿಂಸೆ ಎಷ್ಟು ಟೊಳ್ಳು ಎನ್ನುವುದು ಅರ್ಥವಾದೀತು. ಹಾಗೆಯೇ ಗಾಂಧಿಯನ್ನು ಅಹಿಂಸಾಸಾಧಕ, ಅವರ ಅಹಿಂಸೆಯಿಂದಲೇ ಭಾರತಕ್ಕೆ ಸ್ವಾತಂತ್ರ್ಯ ಬಂದಿತೆಂದು ದೊಡ್ಡ ಗಂಟಲಲ್ಲಿ ಅರಚಾಡುವ ಪ್ರತಿಯೊಬ್ಬ ಗಾಂಧಿವಾದಿಯೂ ಅಹಿಂಸೆ ಎಂದರೇನೆಂದು ಪ್ರಥಮತಃ ಅರಿತುಕೊಳ್ಳುವುದು ಐತಿಹಾಸಿಕ-ಸಾಮಾಜಿಕ ದೃಷ್ಟಿಯಿಂದ ಬಹಳ ಒಳ್ಳೆಯದು. ಕಣ್ಣೆದುರಿನಲ್ಲೇ ಅಸಂಖ್ಯ ಹಿಂದೂಗಳು ಮುಸ್ಲಿಮರಿಂದ ಹತ್ಯೆಗೊಳಗಾದರು ಎನ್ನುವುದರಲ್ಲೇ ಗಾಂಧಿಯ ಅಹಿಂಸೆ ಕೇವಲ ಬಹಿರಂಗ ಪ್ರತಿಪಾದನೆಯಷ್ಟೇ, ಆಂತರಂಗಿಕವಾಗಿ ಅವರು ಆಚರಿಸಿದ್ದು ಹಿಂಸೆಯನ್ನೇ ಎನ್ನುವುದು ವೇದ್ಯವಾಗುತ್ತದೆ. ಮನಸ್ಸಿನಲ್ಲಿ ಹಿಂಸೆಯ ವಿಚಾರಗಳನ್ನು ತುಂಬಿಕೊಂಡು ಗಾಂಧಿ ಅಹಿಂಸೆಯನ್ನು ಮುಖವಾಡವಾಗಿ, ರಾಜಕೀಯ ತಂತ್ರಗಾರಿಕೆಯಾಗಿ, ಆಯುಧವಾಗಿ ಬಳಸಿದರು. ಹೀಗೆ ಅವರ ಅಹಿಂಸಾ ಪ್ರತಿಜ್ಞೆಯು ಮಿಥ್ಯೆಯ ಪ್ರಮಾಣವಾಗಿ, ಆಷಾಢಭೂತಿಯ ಸ್ಲೋಗನ್ ಆಗಿ, "ರಾಷ್ಟ್ರ"ಕ್ಕೆ ಮೋಸವಾಗಿ ಮತ್ತು ಸ್ವಯಂವಂಚನೆಯಾಗಿ ಮಾರ್ಪಟ್ಟಿತು. ಇಂತಹ ವ್ಯಕ್ತಿ ಮಹಾತ್ಮ ಹೇಗಾಗುತ್ತಾರೆ?

               ಗಾಂಧಿ ಹಿಂದೂಗಳನ್ನು ದುರ್ಬಲಗೊಳಿಸುತ್ತಾ, ಮುಸ್ಲಿಮರು ನಮ್ಮವರನ್ನು ಕೊಲ್ಲುತ್ತಿದ್ದಾಗಲೂ ಸುಮ್ಮನೆ ಸಹಿಸಿಕೊಳ್ಳಿ ಎಂದು ಹೇಳಿದುದನ್ನೇ "ಅಹಿಂಸೆ" ಎಂದು ಈ ದೇಶದಲ್ಲಿ ಇಂದಿಗೂ ನಂಬಲಾಗುತ್ತದೆ. ಈ ದೇಶದಲ್ಲಿ ಸೆಕ್ಯುಲರ್ ಎನ್ನುವ ಪದ ಬಂದದ್ದೂ, ಈಗ ಬಳಕೆಯಾಗುತ್ತಿರುವುದೂ ಹಾಗೆಯೇ! ಪ್ರತಿಯೊಂದು ಭಯೋತ್ಪಾದನಾ ದಾಳಿ ನಡೆದಾಗಲೂ ಭಯೋತ್ಪಾದಕರಿಗೆ ಧರ್ಮವಿಲ್ಲ ಎನ್ನುವ ವ್ಯರ್ಥಾಲಾಪವೂ ಈ ಅರೆಬೆಂದ ಅಹಿಂಸೆಯ ಫಲವೇ! ಹಿಂಸೆಯನ್ನು ಅಹಿಂಸೆ ಎಂದು ಪ್ರತಿಪಾದಿಸುದುದರಲ್ಲೇ ಗಾಂಧಿಗೆ ಅಹಿಂಸೆಯ ಬಗ್ಗೆ ಇದ್ದ ಪ್ರಾಥಮಿಕ ತಿಳುವಳಿಕೆಯ ದೋಷ ಎದ್ದು ಕಾಣುತ್ತದೆ. ಯೋಗವಿದ್ಯಾಚಾರ್ಯ ಪಂಚಶಿಕು ಅಹಿಂಸೆಯನ್ನು ಹೀಗೆ ವ್ಯಾಖ್ಯಾನಿಸುತ್ತಾನೆ...
"ಯಥಾ ಯಥಾ ವ್ರತಾನಿ ಬಹೂನಿ ಸಮಾಧಿತ್ಸತೆ
ತಥಾ ತಥಾ ಕೃತಭ್ಯೋ ಹಿಂಸಾ ನಿದಾನೇಭ್ಯೋ ನಿವರ್ತಮಾನ
ಸ್ತಮೇವ ಅವದತರೂಪಾಂ ಅಹಿಂಸಾ ಕರೋತಿ"
- ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅನೇಕ ವ್ರತಗಳು/ಪ್ರಗತಿಯ ಒಂದೊಂದೇ ಹೆಜ್ಜೆಗಳನ್ನಿಡುತ್ತಾರೆ. ಆ ಆಚರಣೆಯ ಹಾದಿಯಲ್ಲಿ ಹಿಂಸೆಯ ಕಾರಣೋತ್ಪಾದಕ ಕೆಲಸಗಳನ್ನು ತ್ಯಜಿಸುತ್ತಾರೆ. ಮತ್ತು ಪರಿಪೂರ್ಣ ಅಹಿಂಸೆಯನ್ನು ಆಚರಿಸುತ್ತಾರೆ. ಅಹಿಂಸೆಯ ಆಚರಣೆ ಪ್ರತಿಯೊಬ್ಬನೂ ತನ್ನಲ್ಲೇ ತಾನು ಮಾಡಿಕೊಳ್ಳಬೇಕಾದ ಪರಿವರ್ತನೆ! ರಾಮಕೃಷ್ಣ ಪರಮಹಂಸರು ತಾನು ಇತರರಿಗೆ ಬೋಧಿಸುವ ಮುಂಚೆ ಅದೆಷ್ಟೇ ಸಣ್ಣ ವಿಷಯವಾಗಿರಲಿ ಅದನ್ನು ತಾನು ಮೊದಲು ಅಳವಡಿಸಿಳ್ಳುತ್ತಿದ್ದರು. ಮಹಾತ್ಮರೆಂದರೆ ಹಾಗೆ. ಆದರೆ ಗಾಂಧಿ ತಾನೇ ಸರಿಯಾಗಿ ಪಾಲಿಸದ ತನ್ನ ಅರೆಬೆಂದ ಅಹಿಂಸೆಯನ್ನು ಇತರರಿಗೆ ಮೊದಲು ಬೋಧಿಸುತ್ತಿದ್ದರು! ತನ್ನೆಲ್ಲೇ ಪರಿವರ್ತನೆ ಆಗದೆ ಇತರರಿಗೆ ಬೋಧನೆ! ಯಾವ ಸೀಮೆಯ ಮಹಾತ್ಮ? ಬ್ರಿಟಿಷರು ಭಾರತವನ್ನು ಯುಕ್ತಿಯಿಂದ ವಶಪಡಿಸಿಕೊಂಡು ಖಡ್ಗದ ಬಲದಿಂದ ಆಳಿದರು. ಅಂತಹವರನ್ನು ಅದೇ ಬಗೆಯ ಯುಕ್ತಿ-ಸಾಹಸಗಳಿಂದ ನಿವಾರಿಸಬೇಕಲ್ಲದೆ ಅಹಿಂಸೆಯ ಮೂರ್ಖವಿಚಾರದಿಂದಲೇ? ಹಿಂಸೆಯನ್ನೇ ಮೈಗೂಡಿಸಿಕೊಂಡ ನರಾಧಮರ ಎದುರು ಅಹಿಂಸೆ ಫಲಕಾರಿಯಾಗಬೇಕಾದರೆ ಆತ ಭಗವಾನ್ ರಮಣರಂತೆ, ಪ್ರಾಚೀನ ಋಷಿಮುನಿಗಳಂತೆ ನಿಜವಾದ ಅಹಿಂಸಾ ಸಾಧಕನಾಗಿರಬೇಕು.

              ಒಂದು ಗಣದ ಸೇನಾ ಮುಖ್ಯಸ್ಥನೊಬ್ಬ ಬುದ್ಧನ ಶಿಷ್ಯನಾಗಲು ದೀಕ್ಷೆ ಸ್ವೀಕರಿಸಬಯಸಿ ಬಂದ. ನೀನು ಯಾವ ಕಾರಣಕ್ಕೆ ನೀನು ಭಿಕ್ಷುವಾಗಲು ಬಯಸಿದ್ದೀಯೇ ಎಂದು ಬುದ್ಧ ಆತನನ್ನು ಪ್ರಶ್ನಿಸಿದ್ದ. ಆಗ ಆತ " ಶತ್ರುಗಳು ನಮ್ಮ ರಾಜ್ಯದ ಮೇಲೆ ದಂಡೆತ್ತಿ ಬಂದಿದ್ದಾರೆ. ನಾನೀಗ ನಮ್ಮ ಸೈನ್ಯವನ್ನು ಮುನ್ನಡೆಸಬೇಕಾಗಿದೆ. ಆದರೆ ಯುದ್ಧದಿಂದ ಎರಡೂ ಪಕ್ಷದಲ್ಲಿ ರಕ್ತಪಾತ ಮತ್ತು ಹಿಂಸೆ ಉಂಟಾಗುತ್ತದೆ. ಅದು ಪಾಪದ ಕೆಲಸ ಎಂದು ನನಗನಿಸುತ್ತದೆ. ಹೀಗಾಗಿ ನಾನು ನನ್ನ ಜವಾಬ್ದಾರಿ ತ್ಯಜಿಸಿ ನಿಮ್ಮ ರೀತಿ ಶಾಂತಿ-ಅಹಿಂಸೆಯ ಹಾದಿಯಲ್ಲಿ ಸಾಗಲು ಬಯಸಿ ಬಂದಿದ್ದೇನೆ" ಎಂದ. ಬುದ್ಧ ಆತನನ್ನು ಸಮಾಧಾನಪಡಿಸುತ್ತಾ ಹೇಳುತ್ತಾನೆ, "ನೀನು ಇಲ್ಲಿಗೆ ಬಂದೆ ಎನ್ನುವ ಕಾರಣಕ್ಕೆ ಶತ್ರುಗಳು ತಮ್ಮ ಆಕ್ರಮಣವನ್ನೇನೂ ನಿಲ್ಲಿಸುವುದಿಲ್ಲ. ಒಂದು ವೇಳೆ ಮುಗ್ಧ ಜನರನ್ನು ರಕ್ಷಿಸುವ ಹೊಣೆಗಾರಿಕೆಯನ್ನು ನೀನು ತ್ಯಜಿಸಿದ್ದೇ ಆದರೆ ಆ ಹಿಂಸೆಯ ಪಾಪವೆಲ್ಲಾ ನಿನ್ನ ತಲೆಗೇ ಸುತ್ತಿಕೊಳ್ಳುತ್ತದೆ. ಸಜ್ಜನರು ಹಾಗೂ ಪ್ರಾಮಾಣಿಕ ಜನರನ್ನು ಕಾಪಾಡುವುದೇ ಧರ್ಮ. ಹಾಗಾಗಿ ಹಿಂತಿರುಗಿ ಹೋಗಿ ನಿನ್ನ ಹೊಣೆಗಾರಿಕೆಯನ್ನು ನಿಭಾಯಿಸು". ಬುದ್ಧನ ಅಹಿಂಸೆ ಇದು! ಬುದ್ಧ ಇಲ್ಲಿ ಎರಡು ಅಂಶವನ್ನು ಎತ್ತಿ ಹಿಡಿಯುತ್ತಾನೆ. ಒಂದು ನಾಯಕನಾದವ ಹೇಗಿರಬೇಕು, ಅವನ ಕರ್ತವ್ಯಗಳೇನು ಎನ್ನುವುದು; ಎರಡನೆಯದ್ದು ನೈಜ ಅಹಿಂಸೆ ಎಂದರೆ ಹೇಗಿರಬೇಕು ಎನ್ನುವುದು. ಗಾಂಧಿಯ ಅಹಿಂಸೆಗೂ  ಬುದ್ಧನ ಅಹಿಂಸೆಗೂ ಅಜಗಜಾಂತರ!

ಬುಧವಾರ, ಸೆಪ್ಟೆಂಬರ್ 14, 2016

ಯಾರು ಮಹಾತ್ಮ? ಭಾಗ- ೪

ಯಾರು ಮಹಾತ್ಮ? 
ಭಾಗ- ೪

                       ವಿಭಜನೆಗೆ ಹಲವಾರು ವರುಷಗಳ ಮುನ್ನವೇ ಪಾಕಿಸ್ತಾನ ಸ್ಥಾಪನೆಗೆ ತಳಹದಿಯಾಗಿತ್ತು. ಎಲ್ಲಿದ್ದರೂ ತಮ್ಮ ಪ್ರತ್ಯೇಕ ಅಸ್ತಿತ್ವದಿಂದ ಗುರುತಿಸಿಕೊಳ್ಳುವ ಮನೋಭಾವವಿರುವ ಮುಸಲರಿಗೆ ಈ ಕಾರ್ಯಕ್ಕೆ ಬೀಜರೂಪ ಒದಗಿದ್ದು ಸೈಯ್ಯದ್ ಮೊಹಮ್ಮದನ "ಮೊಹಮ್ಮದನ್ ಆಂಗ್ಲೋ ಯೂನಿವರ್ಸಿಟಿ". ಮುಸ್ಲಿಂ ಲೀಗಿನ ಸ್ಥಾಪನೆಗೆ ಬೀಜಾರೋಪವಾದದ್ದು ಮುಂದೆ ಅಲಿಗಢ ವಿವಿಯಾಗಿ ಬದಲಾದ ಈ ಮೊಹಮ್ಮದ್ ಆಂಗ್ಲೋ ಓರಿಯಂಟಲ್ ಕಾಲೇಜಿನಲ್ಲೇ! ಮಹಮ್ಮದ್ ಇಕ್ಬಾಲ್ ಮುಸ್ಲಿಂ ಲೀಗಿನ ಅಧ್ಯಕ್ಷನಾಗಿ 1930ರಲ್ಲಿ ನಡೆದ ಮುಸ್ಲಿಂ ಲೀಗಿನ ರಜತಸಂಭ್ರಮದಲ್ಲಿ ಪಂಜಾಬ್, ಸಿಂಧ್, ಬಲೂಚ್ ಗಳನ್ನೊಳಗೊಂಡ ಪ್ರತ್ಯೇಕ ಮುಸ್ಲಿಂ ರಾಷ್ಟ್ರದ ಕನಸನ್ನು ಬಿತ್ತಿದ. ಇದು ಮುಂದಕ್ಕೆ ಅಲಿಗಢ ಚಳುವಳಿಯಾಗಿ ಬೆಳೆಯಿತು. ರಹಮತ್ ಅಲಿ ಚೌಧರಿ "ಪಾಕಿಸ್ತಾನ್" ಎನ್ನುವ ಹೆಸರನ್ನೂ ಕೊಟ್ಟ. ಇಕ್ಬಾಲನ ಎಡೆಬಿಡದ ಪತ್ರಗಳು ಹಾಗೂ ತನ್ನ ರಾಷ್ಟ್ರೀಯವಾದಿ ಮನಸ್ಥಿತಿ & ಕಾರ್ಯದೆಡೆಗಿನ ಗಾಂಧೀ-ನೆಹರೂಗಳ ಅವಗಣನೆ ಜಿನ್ನಾನನ್ನು ಪ್ರತ್ಯೇಕತಾವಾದಿಯಾಗಿ ಮಾಡಿ ಇಕ್ಬಾಲನ ಕನಸನ್ನೂ ರಹಮತನ ಹೆಸರನ್ನೂ ಒಟ್ಟಿಗೆ ಸೇರಿಸಿತು. ಹೀಗೆ ಪ್ರತ್ಯೇಕತೆಯನ್ನೇ ಒಡಲಲ್ಲಿಟ್ಟುಕೊಂಡು ಬೆಳೆದಿದ್ದ, ಪ್ರತ್ಯೇಕತೆಯನ್ನೇ ಪ್ರತಿಪಾದಿಸುತ್ತಿದ್ದ, ಶಿಕ್ಷಣ-ರಾಜಕೀಯ-ಅಂತಾರಾಷ್ಟ್ರೀಯ ಸಂಗತಿಗಳೆಲ್ಲದರಲ್ಲೂ ಮುಸ್ಲಿಂ ಹಿತಾಸಕ್ತಿಯನ್ನೇ ಮುಂದುಮಾಡುತ್ತಿದ್ದ, ಬ್ರಿಟಿಷರ ಕುಟಿಲ ಕಾರ್ಯಕ್ರಮ "ವಂಗ ಭಂಗ"ವನ್ನು ಬೆಂಬಲಿಸಿ, ಸ್ವದೇಶಿ ವಸ್ತುಗಳ ಬಳಕೆ-ವಿದೇಶೀ ವಸ್ತುಗಳ ಬಹಿಷ್ಕಾರ ಚಳುವಳಿಯನ್ನು ವಿರೋಧಿಸಿದ್ದ, ಖಿಲಾಫತ್ ಚಳುವಳಿಯನ್ನು ಇಲ್ಲೂ ಹುಟ್ಟು ಹಾಕಿ ಮಲಬಾರಿನಿಂದ ಮುಲ್ತಾನಿನವರೆಗೆ ಹಿಂದೂಗಳ ಮೇಲೆ ಭೀಕರ ಅತ್ಯಾಚಾರವೆಸಗಿದ್ದ ಮುಸ್ಲಿಂ ಲೀಗ್ ಮೇಲೆ ನಂಬಿಕೆಯಿರಿಸಿದ್ದ; ಹಿಂದೂಗಳ ಕೊಲೆ-ಅತ್ಯಾಚಾರಕ್ಕೆ ಕಾರಣವಾಗಿದ್ದ ಖಿಲಾಫತ್ ಚಳುವಳಿಗೆ ಹಿಂದೂಗಳಿಂದಲೇ ಧನ ಸಂಗ್ರಹ ಮಾಡುತ್ತಾ, ಹಿಂದೂಗಳ ಕೊಲೆಯನ್ನು ನಿರ್ಲಕ್ಷ್ಯಿಸಿದ್ದ ಗಾಂಧಿ ಮಹಾತ್ಮ ಅಥವಾ ರಾಜಕೀಯ-ಸಾಮಾಜಿಕ ನಾಯಕ ಬಿಡಿ, ಯಾವ ಕೋನದಿಂದ "ಮನುಷ್ಯ"ನಾಗಿ ಕಾಣುತ್ತಾರೆ ಎನ್ನುವುದನ್ನು ಅವರ ಭಕ್ತರೇ ಹೇಳಬೇಕು.

                ಒಮ್ಮೆ ಯಾರೋ ಗಾಂಧಿಗೆ ಕೇಳಿದರು "ಹುಚ್ಚುನಾಯಿ ಬೇಕಾಬಿಟ್ಟಿ ವರ್ತಿಸಿದರೆ ಏನು ಮಾಡಬೇಕು?" ಆಗ ಗಾಂಧಿ "ಈ ಮಾತು ಅಕ್ಷರಶಃ ಹುಚ್ಚುನಾಯಿಯ ಕುರಿತಾಗಿದ್ದರೆ ಅದನ್ನು ಶೂಟ್ ಮಾಡಬೇಕು. ಅದು ಮುಸ್ಲಿಂ ದಂಗೆಕೋರರ ಕುರಿತಾಗಿದ್ದರೆ ಅದನ್ನು ಅನ್ವಯಿಸಲಾಗದು. ಒಬ್ಬಾತನ ವೈರಿ ಉನ್ಮಾದದಿಂದ ವರ್ತಿಸಿದರೆ ಅವನನ್ನು ಶೂಟ್ ಮಾಡಬಾರದು , ಬದಲಾಗಿ ಚಿಕಿತ್ಸೆಗೆ ಮಾನಸಿಕ ಆಸ್ಪತ್ರೆಗೆ ಕಳಿಸಬೇಕು." ಎಂದರು. ಈ ಮಾತುಕತೆಯಿಂದ ಒಂದು ಸ್ಪಷ್ಟವಾಗುತ್ತದೆ. ಗಾಂಧಿಯ ಬೆಂಬಲಿಗರೂ ಕ್ರುದ್ಧರಾಗುವಷ್ಟು ಅನಾಚಾರವನ್ನು ಮುಸಲರು ಎಸಗುತ್ತಿದ್ದರು. ಹಾಗೂ ಗಾಂಧಿ ಅವರ ತಪ್ಪನ್ನು ಮನ್ನಿಸುತ್ತಿದ್ದರು. ಗಾಂಧಿ ಇಲ್ಲಿ ಮರೆಮಾಚುವ ಸಂಗತಿ ಇನ್ನೊಂದಿದೆ. ಮುಸ್ಲಿಮರು ಉನ್ಮಾದರಾಗುವುದು ಮನದ ಹುಚ್ಚಿನಿಂದಲ್ಲ; ಮತದ ಹುಚ್ಚಿನಿಂದ! ಅದು ವಾಸಿಯಾಗುವ ಕಾಯಿಲೆಯಲ್ಲ!

                 ಅಹಿಂಸೆ ಅಹಿಂಸೆ ಎಂದು ಹೇಳುತ್ತಾ ಕ್ರಾಂತಿಕಾರಿಗಳನ್ನು ದಾರಿ ತಪ್ಪಿದ ದೇಶಭಕ್ತರು ಎಂದು ಕರೆಯುತ್ತಿದ್ದ ಗಾಂಧಿ 1947ರ ಜೂನ್ 16ರಂದು ಪ್ರಾರ್ಥನಾ ಸಭೆಯಲ್ಲಿ ಮಾತನಾಡುತ್ತಾ "ನಮ್ಮ ಬಳಿ ಅಣುಬಾಂಬ್ ಇದ್ದಿದ್ದರೆ ಅದನ್ನು ಬ್ರಿಟಿಷರ ವಿರುದ್ಧ ಪ್ರಯೋಗಿಸಬಹುದಿತ್ತು. ನಾವು ನಮ್ಮ ಅಸಹಾಯಕತೆಯಿಂದ ಅಹಿಂಸೆ ಎನ್ನುವ ಅಸ್ತ್ರವನ್ನು ಅದು ದೋಷಪೂರಿತವಾಗಿದ್ದರೂ, ದುರ್ಬಲವಾಗಿದ್ದರೂ ಅದನ್ನು ಅಳವಡಿಸಿಕೊಂಡಿದ್ದೇವೆ" ಎಂದರು. ಎಂತಹಾ ಎಡಬಿಡಂಗಿತನ! ಸಾವರ್ಕರ್ ಬಿಡುಗಡೆಗೆ ಭಾರತೀಯರು ಸಹಿ ಸಂಗ್ರಹಿಸುತ್ತಿದ್ದಾಗ ಅವರು ಕ್ರಾಂತಿಕಾರಿ ನಾಯಕ ಎನ್ನುವ ಏಕೈಕ ನೆಪವೊಡ್ಡಿ ಹಿಂದೊಮ್ಮೆ ಸಾವರ್ಕರ್ ಭಾಷಣ ಕೇಳಲೆಂದೇ ದಕ್ಷಿಣಾ ಆಫ್ರಿಕಾದಿಂದ ಇಂಗ್ಲೆಂಡಿಗೆ ತೆರಳಿದ್ದ ಗಾಂಧಿ ಸಹಿ ಹಾಕಿರಲಿಲ್ಲ. ಭಗತ್ ಸಿಂಗ್ ಗಲ್ಲು ಶಿಕ್ಷೆ ತಪ್ಪಿಸುವ ಸಹಿ ಸಂಗ್ರಹದಲ್ಲೂ ಇದನ್ನೇ ಅನುಸರಿಸಿದ ಗಾಂಧಿ ಎಲ್ಲಾ ಮುಗಿದ ಮೇಲೆ ಅಣು ಬಾಂಬು ಪ್ರಯೋಗದ ಮಾತನ್ನಾಡುತ್ತಿದ್ದಾರೆ! ಅಲ್ಲದೆ ಅವರು ಅಸಹಾಯಕತೆಯಿಂದ ಅಹಿಂಸೆಯನ್ನು ಅನುಸರಿಸಿದ್ದಂತೆ! ಅಸಹಾಯಕರು ಯಾರೂ ಇರಲಿಲ್ಲ; ಈ ಗಾಂಧಿ ಬೆಂಬಲಿಗ ಮಂದಗಾಮಿಗಳು ಕನಿಷ್ಟ ತೆಪ್ಪಗಿದ್ದರೆ ಸಾಕಿತ್ತು; ಕ್ರಾಂತಿಕಾರಿಗಳು ಭವ್ಯ ಭಾರತವನ್ನೇ ಸೃಷ್ಟಿಸುತ್ತಿದ್ದರು. ಭಾರತೀಯರ ಕ್ಷಾತ್ರವನ್ನು ಮರೆಸುವಂತಹ ಅವರೇ ಮನಗಂಡ ದೋಷಪೂರಿತ, ದುರ್ಬಲ ಅಹಿಂಸೆಯನ್ನು ತಾನು ಮಾತ್ರ ಅನುಸರಿಸಿ, ಉಳಿದ ಭಾರತೀಯರಿಗೆ ಬೋಧಿಸದೆ, ತನ್ನ ಪ್ರಯೋಗಗಳನ್ನು ಸಮಾಜದ ಮೇಲೆ ಹೇರದೆ ತನ್ನ ಕ್ರೈಸ್ತ ಪ್ರಣೀತ ಆಧ್ಯಾತ್ಮಿಕತೆಯನ್ನು ಸ್ವಾತಂತ್ರ್ಯ ಹೋರಾಟದೊಂದಿಗೆ ಬೆರೆಸದೆ ತೆಪ್ಪಗೆ ತನ್ನಷ್ಟಕ್ಕೆ ತಾನಿದ್ದರೆ ಸಾಕಿತ್ತು! ಭಾರತೀಯರು ಸಾವರ್ಕರ್, ವಿವೇಕಾನಂದರು, ಅರವಿಂದರಾದಿಯಾಗಿ ರಾಷ್ಟ್ರವೀರರು ಪ್ರತಿಪಾದಿಸಿದ್ದ, ಪುರಾತನ ಭಾರತ ಹೊಂದಿದ್ದ ಸ್ವಾತಂತ್ರ್ಯವನ್ನು ಪಡೆಯುತ್ತಿದ್ದರು!

                ಮುಸಲ್ಮಾನರಿಗೆ ಎಳ್ಳಷ್ಟು ನೋವಾಗಬಾರದು ಎನ್ನುವ ಅಹಿಂಸೆಯನ್ನು ಪ್ರತಿಪಾದಿಸಿದ ಗಾಂಧಿ ಆಶ್ರಮ(?)ದ ಜಾಗಕ್ಕೆ ದಾಂಗುಡಿಯಿಡುತ್ತಿದ್ದ ಮಂಗಗಳ ಮೇಲೆ ದಾಳಿ ಮಾಡಲು ಅನುಮತಿ ಕೊಟ್ಟರು! ಗಾಂಧಿಯ ದೃಷ್ಠಿಯಲ್ಲಿ ತನ್ನ ಆಹಾರಕ್ಕಾಗಿ ಬೆಳೆ ಹಾನಿ ಮಾಡುವ ವಾನರಗಳಿಗಿಂತ ಜೀವ ಹಾನಿ ಮಾಡುವ ಮತಾಂಧರು ಶ್ರೇಷ್ಠರು! "ಹಿಂಸೆ" ಎನ್ನುವ ನೆಪವೊಡ್ಡಿ ತಮ್ಮ ಪತ್ನಿ ಕಸ್ತೂರ್ ಬಾ ಅವರಿಗೆ ಪೆನ್ಸಿಲಿನ್ ಅನ್ನು ಚುಚ್ಚುಮದ್ದು ಮೂಲಕ ನೀಡುವುದಕ್ಕೆ ಅನುಮತಿ ಕೊಡದ ಗಾಂಧಿ ಮೊಮ್ಮಗಳು ಮನುವಿನ ಶಸ್ತ್ರಚಿಕಿತ್ಸೆಗೆ ಲಗುಬಗೆಯಿಂದ ಅನುಮತಿ ನೀಡಿದರು! ಕಸ್ತೂರ್ ಬಾ ಹೀಗೆ ಚಿಕಿತ್ಸೆ ಇಲ್ಲದೆ ಕೊನೆಯುಸಿರೆಳೆದರು. ಒಂದು ರೀತಿಯಲ್ಲಿ ಅವರ ಸಾವಿಗೆ ಗಾಂಧಿಯೇ ಕಾರಣ!

                1947ರ ಹೊಸವರ್ಷದ ದಿನದಂದು ಶ್ರೀರಾಮ್ ಪುರದಲ್ಲಿ ಮುಸ್ಲಿಮ್ ಗೂಂಡಾಗಳು ಇದ್ದಕ್ಕಿದ್ದಂತೆ ಹಿಂದೂಗಳ ಮೇಲೆ ಮುಗಿಬಿದ್ದರು. ಹಲವರನ್ನು ಕತ್ತರಿಸಿದರು. ಹೆಂಗಳೆಯರ ಅತ್ಯಾಚಾರಗೈದರು. ಮನೆಗಳ ಸುಲಿಗೆ ಮಾಡಿ ಬೆಂಕಿ ಹಚ್ಚಿದರು. ಗೋಮಾಂಸ ತಿನ್ನುವಂತೆ ನೆರೆಯವರನ್ನು ಬಲಾತ್ಕರಿಸಿದರು. ಗಾಂಧಿಯ ಗುಡಿಸಲಿಗೂ ಬೆಂಕಿಬಿತ್ತು. ಗಾಂಧಿ ನಡೆಯುತ್ತಿದ್ದ ದಾರಿಗೂ! ಆದರೂ ಗಾಂಧಿ ಬದಲಾಗಲಿಲ್ಲ. ಅವರ ಮುಸ್ಲಿಂ ಪ್ರೇಮ ವಿಪರೀತಕ್ಕೇರಿತು!

              1924ರ ಸೆಪ್ಟೆಂಬರ್ 13ರ ಯಂಗ್ ಇಂಡಿಯಾ ಪತ್ರಿಕೆಯಲ್ಲಿ ಗಾಂಧಿ ಬರೆಯುತ್ತಾರೆ "ಅನೇಕ ಬಾರಿ ವ್ಯಕ್ತಿಯೊಬ್ಬನ ಕ್ರಿಯೆಗಳು ಅಹಿಂಸೆಯ ಅರ್ಥದಲ್ಲಿ ವಿಶ್ಲೇಷಣೆಯನ್ನು ನಿರಾಕರಿಸುತ್ತವೆ. ಆ ಶಬ್ಧದ ಉನ್ನತ ನೆಲೆಯಲ್ಲಿ ವ್ಯಕ್ತಿಯೊಬ್ಬ ಪೂರ್ಣ ಅಹಿಂಸಾವಾದಿಯಾಗಿದ್ದರೆ ಹಲವು ಸಾರಿ ಆತನ ಕ್ರಿಯೆಗಳು ಹಿಂಸೆಯ ಚಹರೆಯನ್ನು ಧರಿಸಬಹುದು". ಇದು ವೇದಗಳು, ದೃಷ್ಟಾರರು, ಋಷಿಮುನಿಗಳು ಹೇಳಿದ ಅಹಿಂಸೆಯೂ ಅಲ್ಲ; ಸಾಮಾನ್ಯ ಜನರಿಗೆ ತಿಳಿದಿರಬಹುದಾದ ಅಹಿಂಸೆಯೂ ಅಲ್ಲ. ಅಷ್ಟರಮಟ್ಟಿಗೆ ಗಾಂಧಿ ಹೊಸತೊಂದು "ಅಹಿಂಸೆ"ಯನ್ನು ಕಂಡುಹಿಡಿದರು. ವ್ಯಕ್ತಿಯೊಬ್ಬನ ಕ್ರಿಯೆಗಳು ಹಿಂಸಾ ರೂಪ ತಾಳಿದುದೆವೆಂದರೆ ಆತ ಅಹಿಂಸಾವಾದಿ ಹೇಗಾಗುತ್ತಾನೆ? ಬಹುಷಃ ಗಾಂಧಿ ತಮ್ಮ ಉದಾಹರಣೆಯನ್ನೇ ಕೊಡಬಹುದು. ಅವರ ಅಹಿಂಸೆಯ ಕಾರಣದಿಂದ ಹಿಂದೂಗಳು ನಿರ್ವೀರ್ಯರಾಗಿ ಮುಸ್ಲಿಮರಿಂದ ದೌರ್ಜನ್ಯಕ್ಕೊಳಗಾದರಲ್ಲ. ಅಥವಾ ಗಾಂಧಿ ಆ ಮತಾಂಧ ಮುಸ್ಲಿಮರನ್ನೇ ಅಹಿಂಸಾವಾದಿಗಳೆನ್ನಬಹುದು. ತಮ್ಮ ಮತಕ್ಕಾಗಿ ಅವರು ದೌರ್ಜನ್ಯವೆಸಗುವುದರಿಂದ, ಕ್ರಿಯೆಯಲ್ಲಿ ಹಿಂಸೆ ಕಂಡರೂ ಅವರು ಅಹಿಂಸಾವಾದಿಗಳೇ ಎಂದು. ಈ ರೀತಿ ಗಾಂಧಿ ಹೇಳಿದ ಮಾತುಗಳೂ ಇಲ್ಲದಿಲ್ಲ(ಮುಸ್ಲಿಮರು ಹಿಂದೂಗಳನ್ನು ಖಿಲಾಫತ್, ಕಪ್ಪುದಿನಗಳ ಹೆಸರಲ್ಲಿ ಕೊಲ್ಲುತ್ತಿದ್ದಾಗ ಗಾಂಧಿಯಿಂದ ಇಂತಹ ಹಲವಾರು ಅಣಿಮುತ್ತುಗಳು ಹೊರಬಿದ್ದಿದ್ದವು). ಅಂದರೆ ಕೇವಲ ಶಬ್ಧಾರ್ಥದಲ್ಲಿ ಅಹಿಂಸೆ ಇದ್ದರಾಯಿತೇ? ಕ್ರಿಯೆಯಲ್ಲಿ ಆತ ಹಿಂಸೆ ಎಸಗಿದ್ದರೂ ಆತ ಅಹಿಂಸಾವಾದಿ! ಎಂತಹ ವಿಪರ್ಯಾಸ ಇಂತಹ ಗೊಂದಲ ಪುರುಷನಿಗೆ ಅಹಿಂಸಾವಾದಿಯ, ಮಹಾತ್ಮನ ಪಟ್ಟ ಕಟ್ಟಿದವರ ಬುದ್ಧಿಮಟ್ಟವೇ!

                 ಜನರಲ್ ಕಾರ್ಯಪ್ಪ ಭಾರತಕ್ಕೆ ಬೇಕಾದುದು ಅಹಿಂಸೆಯಲ್ಲ, ಬಲಿಷ್ಠ ಸೇನೆ ಎಂದಿದ್ದರು. ಅವರ ಈ ಮಾತನ್ನು ಕೇಳಿದ ಗಾಂಧಿ ತಮ್ಮ ಹರಿಜನ ಸಂಚಿಕೆಯಲ್ಲಿ ಈ ವಿಚಾರವಾಗಿ ಟೀಕಿಸುತ್ತಾ "ಕಾರ್ಯಪ್ಪನವರಿಗಿಂತ ಶ್ರೇಷ್ಠವಾದ ಜನರಲ್ ಗಳು ಕೂಡಾ ಮಹಾನ್ ಶಕ್ತಿಯಾದ ಅಹಿಂಸೆಯ ಸಾಧ್ಯತೆಗಳ ಬಗ್ಗೆ ಮಾತಾಡಲು ತಮಗೆ ಯಾವುದೇ ಹಕ್ಕಿಲ್ಲ ಎಂದು ವಿವೇಕ-ವಿನಮ್ರತೆಯಿಂದ ಒಪ್ಪಿಕೊಳ್ಳುತ್ತಾರೆ. ಇಂದಿನ ಅಣುಬಾಂಬುಯುಗದಲ್ಲಿ ಹಿಂಸೆಯು ಮುಂದೊಡ್ಡುವ ಎಲ್ಲಾ ಸವಾಲುಗಳನ್ನು ಎದುರಿಸುವ ಏಕೈಕ ಶಕ್ತಿ ಎಂದರೆ ಅಹಿಂಸೆ ಒಂದೇ ಎನ್ನುವುದನ್ನು ನಾನು ಧೈರ್ಯದಿಂದ ಘೋಷಿಸಬಲ್ಲೆ" ಎಂದು ಬರೆದರು. ಗಾಂಧಿಯ ಅಹಿಂಸೆಯನ್ನು ಯಾರಾದರೂ ಅನುಸರಿಸಿದ್ದರೆ ಇವತ್ತು ಜಗತ್ತಿಡೀ ಐಸಿಸ್ ಉಗ್ರರಿಂದ ತುಂಬಿ ಹೋಗಿರುತ್ತಿತ್ತು. ಹಾಗೆಯೇ ಗಾಂಧಿಯೇನಾದರೂ ಬದುಕಿದ್ದರೆ ಐಸಿಸ್ ಉಗ್ರರ "ಹಲಾಲ್ ಕಟ್"ಗೆ ಕೊರಳೊಡ್ಡಿ ಅಹಿಂಸೆಯನ್ನು ಪ್ರತಿಪಾದಿಸುತ್ತಾ ನಸುನಗುತ್ತಾ ಧೈರ್ಯದಿಂದ ಪ್ರಾಣವನ್ನು ಬಿಡುವಂತಹ ಸೌಭಾಗ್ಯವೂ ಸಿಗುತ್ತಿತ್ತು! ಈ ಟೀಕೆಗೆ ಜನರಲ್ ಕಾರ್ಯಪ್ಪ ತಲೆಕೆಡಿಸಿಕೊಳ್ಳಲಿಲ್ಲ. ಅವರು ಈ ಟೀಕೆಯನ್ನು  ಸೇನಾಭಾಷೆಯಂತೆ "ರಾಕೆಟ್" ಎಂದು ಬಣ್ಣಿಸಿದರು! ಗಾಂಧಿಯನ್ನು ಭೇಟಿಯಾಗಿ ಕೆಲ ಪ್ರಶ್ನೆಗಳನ್ನು ಕೇಳಿದರು. ಮೌನ ವ್ರತದಲ್ಲಿದ್ದ, ಚರಕದಲ್ಲಿ ವ್ಯಸ್ತರಾಗಿದ್ದ ಗಾಂಧಿ ಉತ್ತರಗಳನ್ನು ಗೀಚಿದರು. ಎರಡು ದಿನಗಳ ಬಳಿಕ "ಸೈನಿಕರ ಕರ್ತವ್ಯಪ್ರಜ್ಞೆಯ ಮೇಲೆ ಹಾನಿಮಾಡದೆ, ವೃತ್ತಿಪರರಾಗಿಯೇ ಕೆಲಸಮಾಡುವ ನಿಟ್ಟಿನಲ್ಲಿ ಸೇನೆಯಲ್ಲಿ ಅಹಿಂಸೆಯ ಪ್ರೇರಣೆ ತುಂಬುವುದು ಹೇಗೆ?" ಎಂದು ಪ್ರಶ್ನಿಸಿದರು. ಆಗ ಗಾಂಧಿ ಕೊಟ್ಟ ಉತ್ತರ :- "ಉತ್ತರಕ್ಕಾಗಿ ನಾನಿನ್ನೂ ಕತ್ತಲಲ್ಲಿ ತಡವರಿಸುತ್ತಿದ್ದೇನೆ!"

                ಗಾಂಧಿ ತಮ್ಮ ಪ್ರಾರ್ಥನಾ ಸಭೆಗಳಲ್ಲಿ ಕುರಾನ್ ಸಾಲುಗಳನ್ನೂ ಪಠಿಸುತ್ತಿದ್ದರು. ಅವರು ಅದನ್ನು ಮುಂದುವರೆಸಿದರೆ ಮನುವನ್ನು ಕೊಲೆಮಾಡುವ ಬೆದರಿಕೆ ಪತ್ರವೂ ಬಂದಿತ್ತು. ಅವರಿಗೆ ಬರುವ ಬಹುತೇಕ ಪತ್ರಗಳು ನಕರಾತ್ಮಕವಾಗಿ ಅವರನ್ನು ದೂಷಿಸಿಯೇ ಇರುತ್ತಿದ್ದವು. ಅವರು ಸ್ವೀಕರಿಸುತ್ತಿದ್ದ 95% ಪತ್ರಗಳಲ್ಲಿ ಬೈಗುಳ, ನಿಂದನೆಗಳೇ ತುಂಬಿರುತ್ತಿದ್ದವು. ಹಿಂದೂಗಳು ಅವರನ್ನು ಮುಸ್ಲಿಮರ ಪಕ್ಷಪಾತಿ ಎಂದು ಜರೆದರೆ, ಮುಸ್ಲಿಮರು ಆತನನ್ನು ತಮ್ಮ ಪರಮವೈರಿ ಎನ್ನುವಂತೆ ನೋಡುತ್ತಿದ್ದರು! ಹೀಗೆ ಆತ ಎಲ್ಲಿಯೂ ಸಲ್ಲಲಿಲ್ಲ! ಅವರಿಗೆ ಬರುತ್ತಿದ್ದ ಕೆಲ ಪತ್ರಗಳಲ್ಲಂತೂ "ಮಹಮ್ಮದ್ ಗಾಂಧಿ", "ಜಿನ್ನಾ ಸೇವಕ" ಎನ್ನುವ ಸಂಭೋದನೆಗಳಿರುತ್ತಿದ್ದವು. ಅವುಗಳಲ್ಲಿ ಕೆಲವೊಂದರ ಒಕ್ಕಣೆ ನೋಡಿ:
"ನಿಮ್ಮ ಅಹಿಂಸಾ ಪದ್ದತಿ ನಿಮ್ಮ ಮೂಗಿನ ಕೆಳಗೇ ದುರ್ವಾಸನೆ ಬೀರುತ್ತಿಲ್ಲವೆ?"
"ಕಳೆದು ಮೂವತ್ತು ವರ್ಷಗಳಿಂದ ನೀವು ಆಚರಿಸುತ್ತಿರುವ ಅಹಿಂಸಾ ಮಾರ್ಗ ಹಿಂಸೆಯ ಫಲಿತಾಂಶವನ್ನೇ ನೀಡಿದೆ. ಇದಕ್ಕಾಗಿ ನಿಮಗೆ ನಾಚಿಕೆಯಾಗುವುದಿಲ್ಲವೇ?"
ಪ್ರತಿದಿನ ಪ್ರಾರ್ಥನಾ ಸಭೆಯಲ್ಲಿ ಅವರು ಕುರಾನ್ ಪಠಿಸುತ್ತಿದ್ದಂತೆ ಕಡು ವಿರೋಧ ವ್ಯಕ್ತವಾಗುತ್ತಿತ್ತು. "ಅವರು ರಾಜಕೀಯದಿಂದ ಆದಷ್ಟು ಬೇಗ ನಿವೃತ್ತಿಯಾದರೆ ದೇಶಕ್ಕೇ ಒಳ್ಳೆಯದು" ಎನ್ನುವ ಮಾತುಗಳು ಅವರದ್ದೇ ಪ್ರಾರ್ಥನಾ ಸಭೆಯಲ್ಲಿ ಸಾಮಾನ್ಯವಾಗಿತ್ತು! 1947ರ ಸೆಪ್ಟೆಂಬರಿನಲ್ಲಿ ದೆಹಲಿಯ ಕಿಂಗ್ಸ್ ವೇ ಕ್ಯಾಂಪಿನಲ್ಲಿ ನಡೆದ ಪ್ರಾರ್ಥನಾ ಸಭೆಯಲ್ಲಿ ಗಾಂಧಿ ಕುರಾನ್ ಪಠಿಸುತ್ತಿದ್ದಂತೆ ಹಲವರು "ಈ ಶ್ಲೋಕಗಳ ಪಠಣದಿಂದ ನಮ್ಮ ತಾಯಂದಿರು, ಪ್ರೀತಿಪಾತ್ರರು ಕೊಲ್ಲಲ್ಪಟ್ಟರು. ಇಲ್ಲಿ ಅದರ ಪಠಣಕ್ಕೆ ಅವಕಾಶ ನೀಡುವುದಿಲ್ಲ" ಎಂದು ಘೋಷಣೆ ಕೂಗಿದರು. "ಗಾಂಧಿ ಮುರ್ದಾಬಾದ್" ಎನ್ನುವ ಘೋಷಣೆಯೂ ಮೊಳಗಿತು.  ಸಭೆಯನ್ನು ಮುಂದೂಡಲಾಯಿತು. ಗಾಂಧಿ ತೆರಳುತ್ತಿದ್ದಂತೆ ಅವರ ಕಾರಿನ ಮೇಲೆ ಕಲ್ಲು ತೂರಲಾಯಿತು. ಕೆಲ ನಿರಾಶ್ರಿತರು ಸೋಡಾ ಬಾಟಲಿಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದರು.(ಮಹಾತ್ಮ ಗಾಂಧಿ - ದಿ ಲಾಸ್ಟ್ ಫೇಸ್, ಸಂಪುಟ-೨, ಪ್ಯಾರೇಲಾಲ್)
ತುಂಡುಬಟ್ಟೆ ತೊಟ್ಟ ಸರಳತೆಯ ಮೂರ್ತಿ ಮಹಾತ್ಮ "ಕಾರಿನಲ್ಲಿ ಪಯಣಿಸುತ್ತಿದ್ದ"!
 

ಗುರುವಾರ, ಸೆಪ್ಟೆಂಬರ್ 8, 2016

ಯಾರು ಮಹಾತ್ಮ? ಭಾಗ- ೩

ಯಾರು ಮಹಾತ್ಮ? ಭಾಗ- ೩

                      ಅಹಿಂಸೆಯನ್ನು ಸಾಧಿಸಿದವನ ಎದುರಲ್ಲಿ ಯಾರಿಗೂ ಶತ್ರುತ್ವ ಭಾವನೆ ಉಂಟಾಗುವುದಿಲ್ಲ. "ಅಹಿಂಸಾ ಪ್ರತಿಷ್ಠಾಯಾಂ ತತಸನ್ನಿಧೌ ವ್ಯರ್ಥಗಃ" ಎನ್ನುತ್ತದೆ ಪತಂಜಲಿ ಯೋಗ ಸೂತ್ರ. “ಬೇರೆಯವರಿಗೆ ಕಿಂಚಿತ್ತೂ ಹಾನಿ ಮಾಡದ ವ್ಯಕ್ತಿಯ ಎದುರಲ್ಲಿ ಕ್ರೂರ ಪ್ರಾಣಿಗಳೂ ವಿನೀತವಾಗುತ್ತವೆ. ಯೋಗಿಯ ಎದುರಲ್ಲಿ ಹುಲಿ ಮತ್ತು ಕುರಿಯೂ ಒಟ್ಟಿಗೆ ಆಟವಾಡುತ್ತವೆ. ನೀವು ಆ ಸ್ಥಿತಿಗೆ ತಲುಪಿದಾಗ ನಿಮ್ಮಲ್ಲಿ ಅಹಿಂಸೆ ದೃಢಗೊಂಡಿದೆ ಎಂದರ್ಥ” - ವಿವೇಕಾನಂದರು. ಗಾಂಧಿಯ ಪ್ರಕಾರ ಅಹಿಂಸೆಯೆಂದರೆ - ಆಕ್ರಮಣಕಾರಿಯೊಬ್ಬ ತಮಗೆ ಹೊಡೆದರೂ ಅದನ್ನು ಪ್ರತಿರೋಧಿಸದೆ ಸುಮ್ಮನಿರುವುದು. ಅವರೇ ಒಂದು ಉದಾಹರಣೆ ಕೊಡುತ್ತಾರೆ- ಹಸುಗಳು ತಮ್ಮನ್ನು ಕೊಲ್ಲಲು ಹುಲಿಗೆ ತಾವಾಗೇ ಅವಕಾಶ ಕೊಡುತ್ತವೆ. ಅಷ್ಟೆಲ್ಲಾ ಗೋವುಗಳನ್ನು ಕೊಂದ ಹುಲಿ ಕೊನೆಗೊಮ್ಮೆ ಆಯಾಸಗೊಳ್ಳುತ್ತದೆ. ಅಹಿಂಸೆಯ ನಂಬಿಗಸ್ಥ ಅನುಯಾಯಿಯಾಗುತ್ತದೆ!" ಯಾವ ಮಗುವಿಗೆ ಬೇಕಾದರೂ ಈ ರೀತಿ ಹೇಳಿ ನೋಡಿ - ನಿಮ್ಮನ್ನು "ಒಂದು ಸುತ್ತು ಲೂಸ್" ಎನ್ನದಿದ್ದರೆ ಮತ್ತೆ ಕೇಳಿ! ಹಿಂದೂಗಳು ಹತ್ಯೆಗೀಡಾಗುತ್ತಿದ್ದರೂ ಕೊಲ್ಲುವ ಮುಸ್ಲಿಮರನ್ನು ಗೌರವ-ಔದಾರ್ಯದಿಂದ ನೋಡಬೇಕು; ಸುಹ್ರಾವರ್ದಿ ಗೂಂಡಾಗಳ ನಾಯಕನಾಗಿದ್ದರೂ ದೆಹಲಿಯಲ್ಲಿ ಮುಕ್ತವಾಗಿ-ಸುರಕ್ಷಿತವಾಗಿ ತಿರುಗಾಡಲು ಬಿಡಬೇಕು. ಇವು ಗಾಂಧಿ ತಮ್ಮ ಪ್ರಾರ್ಥನೆಯ ಸಮಯದಲ್ಲಿ ಪದೇ ಪದೇ ಮಾಡುತ್ತಿದ್ದ ವಕಾಲತ್ತುಗಳು!

                 ಗಾಂಧಿಯ ಆಯ್ದ ಕೆಲವು ಅಣಿಮುತ್ತುಗಳನ್ನು ನೋಡೋಣ! “ಮುಸ್ಲಿಮರು ಹಿಂದೂಗಳ ಅಸ್ತಿತ್ವವನ್ನೇ ನಾಶ ಮಾಡಲು ಯೋಚಿಸಿದರೂ ಕೂಡಾ ಹಿಂದೂಗಳು ಎಂದಿಗೂ ಉದ್ರೇಕಗೊಳ್ಳಬಾರದು. ಕೋಪಿಸಿಕೊಳ್ಳಬಾರದು. ಅವರು ತಲವಾರ್ ತೋರಿಸಿದರೂ ನಾವು ಸಾವನ್ನು ಧೈರ್ಯದಿಂದ ಆಹ್ವಾನಿಸಬೇಕು. ಅವರು ಜಗತ್ತನ್ನೇ ಬೇಕಾದರೂ ಆಳಲಿ, ನಾವು ಅಲ್ಲಿ ವಾಸಿಸಬೇಕು. ಸಾವಿಗೆ ಅಂಜಬಾರದು. ಹುಟ್ಟು ಸಾವು ವಿಧಿಲಿಖಿತ. ಹೀಗಾಗಿ ಸಾವಿನ ಬಗ್ಗೆ ವಿಷಣ್ಣ ಭಾವ ತಾಳಬೇಕು. ನಾವೆಲ್ಲ ಕಿರುನಗೆಯನ್ನಿಟ್ಟುಕೊಂಡೇ ಸಾವನ್ನಪ್ಪಿದರೆ ನವ ಜೀವನವನ್ನು ಪ್ರವೇಶಿಸುತ್ತೇವೆ. ನಾವು ಹೊಸ ಹಿಂದೂಸ್ಥಾನವನ್ನು ನಿರ್ಮಿಸುತ್ತೇವೆ.”(1947 ಏಪ್ರಿಲ್ 6ರಂದು ಮಾಡಿದ ಭಾಷಣ) “ಒಂದು ವೇಳೆ ನಮ್ಮವರು ಕೊಲೆಯಾದರೂ ನಾವೇಕೆ ಕೊಲೆಗಾರರ ಮೇಲೆ ಕೋಪಮಾಡಿಕೊಳ್ಳಬೇಕು? ಅವರು ಕೊಲ್ಲಲ್ಪಟ್ಟರೂ ಸಹ ಉತ್ತಮ, ಸೂಕ್ತ ಅಂತ್ಯವನ್ನೇ ಕಂಡಿದ್ದಾರೆ ಎಂದು ಮನವರಿಕೆ ಮಾಡಿಕೊಳ್ಳಬೇಕು. ನಮಗೆಲ್ಲಾ ಇಂಥದೇ ಸ್ವರ್ಗ ಕಾದಿರಬಹುದು. ದೇವರು ನಮ್ಮನ್ನೂ ಇದೇ ಹಾದಿಯಲ್ಲೇ ಕಳುಹಿಸಬಹುದು. ನಾವು ಹೃದಯಪೂರ್ವಕವಾಗಿ ಮಾಡಬೇಕಾದ ಪ್ರಾರ್ಥನೆ ಇದೇ”(1947 ಸೆಪ್ಟೆಂಬರ್ 23ರಂದು ಮಾಡಿದ ಭಾಷಣ). “ಪಂಜಾಬಿನಲ್ಲಿ ಸತ್ತವರ್ಯಾರೂ ತಿರುಗಿ ಬರಲಾರರು. ಸಾವಿಗೀಡಾದವರು ಧೈರ್ಯದಿಂದ ಮರಣವನ್ನು ಎದುರಿಸಿದ್ದರೆ ಅವರು ಏನನ್ನೂ ಕಳೆದುಕೊಳ್ಳುವುದಿಲ್ಲ. ಬದಲಾಗಿ ಕೆಲವನ್ನು ಗಳಿಸುತ್ತಾರೆ. ನಾವೆಲ್ಲಾ ಆ ರೀತಿ ವರ್ತಿಸಿದರೆ ದೇವರೇ ಅವರ ಖಡ್ಗವನ್ನು ತುಂಡರಿಸುತ್ತಾನೆ.” (ಮಹಾತ್ಮಗಾಂಧಿ-ದಿ ಲಾಸ್ಟ್ ಫೇಸ್-೨, ಪ್ಯಾರೇಲಾಲ್). ಇವೆಲ್ಲವೂ ಹಿಂದೂಗಳನ್ನು ಮುಸ್ಲಿಮರು ಅಟ್ಟಾಡಿಸಿ ಕೊಲೆಗೈಯ್ಯುತ್ತಿದ್ದಾಗ, ನಮ್ಮ ಸ್ತ್ರೀಯರನ್ನು ಅತ್ಯಾಚಾರವೆಸಗುತ್ತಿದ್ದಾಗ, ಗರ್ಭಿಣಿಯರ ಗರ್ಭ ಸೀಳುತ್ತಿದ್ದಾಗ ಗಾಂಧಿ ನೀಡಿದ ಉಪದೇಶಗಳು. ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಶು ಕದಾಚನಾ ಎಂದ ಭಗವಾನ್ ಕೃಷ್ಣ ಇದನ್ನು ಕೇಳುತ್ತಿದ್ದರೆ ಗಾಬರಿಗೊಂಡು ಇಂತಹವನ್ನು ಖಂಡಿತ ಕೌರವ ಪಕ್ಷಕ್ಕೆ ಓಡಿಸುತ್ತಿದ್ದ!

               ಜುಲೈ 27, 1947ರ "ಹರಿಜನ"ದಲ್ಲಿ ಗಾಂಧಿ "ನನ್ನ ಹಿರಿಮಗ ಪ್ರತೀ ಬಾರಿ ಬಂದಾಗಲೂ "ನಾನು ಭವಿಷ್ಯದಲ್ಲಿ ಉತ್ತಮ ವ್ಯಕ್ತಿಯಾಗುತ್ತೇನೆ. ಇನ್ನು ಮುಂದೆ ವೈನ್ ಮುಟ್ಟುವುದಿಲ್ಲ" ಎಂದು ಹೇಳುತ್ತಿದ್ದ. ನಿನ್ನ ಮಾತಿನಲ್ಲಿ ವಿಶ್ವಾಸವಿಲ್ಲದಿದ್ದರೂ ನಿನಗೆ ಒಂದು ಅವಕಾಶ ನೀಡುತ್ತೇನೆ ಎನ್ನುತ್ತಿದ್ದೆ. ಆತನಿಂದ ಅದನ್ನು ಪಾಲಿಸಲು ಆಗುತ್ತಿರಲಿಲ್ಲ. ಅದು ನನಗೂ ತಿಳಿದಿತ್ತು. ಆದರೂ ನಾನು ಅವನು ಬದಲಾಗುತ್ತಾನೆ ಎಂದು ನಂಬಿದ್ದೆ. ಪ್ರತೀ ಬಾರಿ ಬಂದಾಗಲೂ ಇದೇ ರೀತಿ ನಡೆಯುತ್ತಿತ್ತು. ಇದೇ ರೀತಿ ನಾವು ಮುಸ್ಲಿಮರ ಮೇಲೆ ವಿಶ್ವಾಸವಿಡಬೇಕು" ಎಂದು ಬರೆದಿದ್ದರು. ಅಂದರೆ ಮುಸ್ಲಿಮನೊಬ್ಬ ಬದಲಾಗದಿದ್ದರೂ ಅವನ ಮೇಲೆ ವಿಶ್ವಾಸವಿಡಬೇಕು. ಅವನು ನಮ್ಮ ಮೇಲೆ ಹಲ್ಲೆ ಮಾಡಿದರೂ ಅವನ ಮೇಲೆ ವಿಶ್ವಾಸವಿಡಬೇಕು. ನಮ್ಮವರನ್ನು ಕೊಲೆಮಾಡಿದರೂ ಅವನನ್ನು ನಾವು ನಂಬಬೇಕು. ನಮ್ಮ ಸ್ತ್ರೀಯರ ಮೇಲೆ ಅತ್ಯಾಚಾರವೆಸಗಿದರೂ ಅವನ ಬಳಿ ಜೊಲ್ಲು ಸುರಿಸುತ್ತಾ ಬೇಡಬೇಕು! ಅಂದರೆ ಮುಸ್ಲಿಮನೊಬ್ಬ ಬದಲಾಗುವುದಿಲ್ಲವೆಂದು ಗಾಂಧಿಗೂ ತಿಳಿದಿತ್ತು. ಆದರೂ ತನ್ನದೇ ಆದ ಅಹಿಂಸಾ ನೀತಿಯನ್ನು ಬಡಪಾಯಿ ಹಿಂದೂಗಳ ಮೇಲೆ ಅನ್ಯಾಯವಾಗಿ ಹೇರಲೆತ್ನಿಸಿದರು. ಒಂದು ರೀತಿಯಲ್ಲಿ ಹಿಂದೂಗಳ ಕೊಲೆಗೆ ಗಾಂಧಿಯೇ ಕಾರಣಕರ್ತರಾದರು.

                   ಕೆಟ್ಟಕೆಲಸಗಳನ್ನು ಮಾಡುವವರನ್ನು ಶಿಕ್ಷಿಸಲು ಹಿಂದೂ ಧರ್ಮ ಅನುಮತಿ ನೀಡುವುದಿಲ್ಲವೇ? ಅವಕಾಶ ನೀಡುವುದಿಲ್ಲ ಎಂದಾದರೆ ಕೌರವರನ್ನು ಕೊಲ್ಲುವಂತೆ ಕೃಷ್ಣ ಭಗವದ್ಗೀತೆಯ ಎರಡನೆಯ ಅಧ್ಯಾಯದಲ್ಲಿ ಬೋಧಿಸಿರುವುದನ್ನು ಹೇಗೆ ವಿವರಿಸುತ್ತೀರಿ? ಎನ್ನುವ ಪ್ರಶ್ನೆಯನ್ನು ಸ್ವಲ್ಪ ಬೊಂಡಿದ್ದ ಗಾಂಧಿ ಭಕ್ತನೊಬ್ಬ ಕೇಳಿದ. ಆಗ ಗಾಂಧಿ "ಮೊದಲನೇ ಪ್ರಶ್ನೆಗೆ ಹೌದು ಅಥವಾ ಇಲ್ಲ ಎನ್ನುವ ಎರಡೂ ಉತ್ತರವನ್ನು ನೀಡಬೇಕಾಗುತ್ತದೆ. ಯಾರನ್ನಾದರೂ ಕೊಲ್ಲುವ ಪ್ರಶ್ನೆ ಉದ್ಭವಿಸುವಾಗ ಯಾರು ಅನಿಷ್ಟ ಕಾರ್ಯ ಮಾಡುವವರು ಎನ್ನುವುದನ್ನು ನಿರ್ಧರಿಸಲು ಒಬ್ಬಾತ ನಿಷ್ಪಕ್ಷಪಾತ ನ್ಯಾಯಾಧೀಶನಾಗಿರಬೇಕಾಗುತ್ತದೆ. ಯಾರಾದರೊಬ್ಬರಿಗೆ ಈ ಹಕ್ಕು ಸಿಗಲು ಆತ ಸಂಪೂರ್ಣವಾಗಿ ದೋಷರಹಿತನಾಗಿರಬೇಕಾಗುತ್ತದೆ. ತಾನೇ ಸ್ವತಃ ತಪ್ಪು ಮಾಡುವ ವ್ಯಕ್ತಿ ಇನ್ನೊಬ್ಬನ ದೋಷಗಳನ್ನು ನಿರ್ಣಯಿಸುವ ಅಥವಾ ಶಿಕ್ಷಿಸುವ ಹಕ್ಕು ತನಗಿದೆ ಎಂದು ಹೇಗೆ ಪ್ರತಿಪಾದಿಸಲು ಸಾಧ್ಯ? ಇನ್ನು ಗೀತೆಯಲ್ಲಿ ಹೇಳಿರುವಂತೆ ಅನಿಷ್ಟ ಕೆಲಸ ಮಾಡುವವನನ್ನು ಶಿಕ್ಷಿಸುವ ಹಕ್ಕು ಕುರಿತಾದ ಎರಡನೇ ಪ್ರಶ್ನೆ. ಇದನ್ನು ಸರ್ಕಾರ ಮಾತ್ರ ಸೂಕ್ತ ರೀತಿಯಲ್ಲಿ ಜಾರಿ ಮಾಡಬಹುದು" ಎಂದು ಪ್ರತಿಕ್ರಿಯಿಸಿದರು. ಎಷ್ಟೊಂದು ದ್ವಂದ್ವತೆ! ಅಂದರೆ ಮುಸ್ಲಿಮನೊಬ್ಬ ವಿನಾ ಕಾರಣ ಹಿಂದೂವೊಬ್ಬನ ಹತ್ಯೆ ಮಾಡಿದರೂ ಅವನನ್ನು ಕೊಲ್ಲುವ ಹಾಗಿಲ್ಲ. ಯಾಕೆಂದರೆ ಕೊಲ್ಲುವವ ಗಾಂಧಿಯಿಂದ "ದೋಷರಹಿತ ಸರ್ಟಿಫಿಕೇಟ್" ಪಡೆಯಬೇಕಾಗುತ್ತದೆ. ಕೆಲವೊಮ್ಮೆ ಅನ್ನಿಸುವುದಿದೆ ಬಹುಷಃ ಕೇಜ್ರಿವಾಲ್ ಗಾಂಧಿಯ ಪಳಿಯುಳಿಕೆಯೇನೋ! ಹಾಗೆಯೇ ಅನಿಷ್ಟ ಕೆಲಸ ಮಾಡುವವನನ್ನು ಸರ್ಕಾರ ಮಾತ್ರ ಶಿಕ್ಷಿಸಬಹುದು; ಗಾಂಧಿಗೆ ಆಳುವ ಬ್ರಿಟಿಷರ ಮೇಲೆ ಎಷ್ಟೊಂದು ನಂಬಿಕೆ! ಅವರೇನಾದ್ರೂ ಶಿಕ್ಷಿಸದಿದ್ದರೆ ಆತ ನಿರಪರಾಧಿ! ಅಲ್ಪಸಂಖ್ಯಾತರು ಏನು ಮಾಡಿದರೂ ಸುಮ್ಮನಿದ್ದು ಬಹುಸಂಖ್ಯಾತರನ್ನು ಸಾಯಬಡಿವ ಇಂದಿನ ರಾಜಕಾರಣಕ್ಕೆ ತಳಹದಿ ಹಾಕಿದ ಅಧ್ವರ್ಯು ಯಾರೆಂದು ಬೇರೆ ಹೇಳಬೇಕಿಲ್ಲ ತಾನೆ!

               ಗಾಂಧಿಯ ಅಹಿಂಸೆ ಹಿಂದೂಗಳಿಗೆ ಮಾತ್ರ! "ಎಲ್ಲಾ ಹಿಂದೂಗಳು ನನ್ನ ಮಾತು ಕೇಳಿದರೆ ಇಡೀ ಜಗತ್ತೇ ಅನುಸರಿಸಲು ಮುಂದಾಗುವಂತಹ ಮಾದರಿಯನ್ನು ನಾವು ಹಾಕಿಕೊಡಬಹುದು. ಈ ಮಾತನ್ನು ಮುಸ್ಲಿಮರಿಗೆ ಯಾಕೆ ಹೇಳಿಕೊಡುತ್ತಿಲ್ಲ ಎಂದರೆ ಅವರಿಂದು ನನ್ನನ್ನು ಶತ್ರುವೆಂದು ಪರಿಗಣಿಸಿದ್ದಾರೆ. ಹಿಂದೂಗಳು ನನ್ನನ್ನು ಶತ್ರು ಎಂದು ನೋಡುವುದಿಲ್ಲ. ಅದಕ್ಕಾಗಿ ತಮ್ಮ ಆಯುಧಗಳನ್ನು ಸಮುದ್ರಕ್ಕೆಸೆಯುವಂತೆ ಧೈರ್ಯತನದ ಅಹಿಂಸೆಯ ಅದ್ವಿತೀಯ ಸಾಮರ್ಥ್ಯ ಮನವರಿಕೆ ಮಾಡಿಕೊಳ್ಳುವಂತೆ ಅವರಿಗೆ ಹೇಳುತ್ತೇನೆ"(ಮಹಾತ್ಮಗಾಂಧಿ-ದಿ ಲಾಸ್ಟ್ ಫೇಸ್-೨, ಪ್ಯಾರೇಲಾಲ್). ಅಬ್ಬಾ ಈತನ ಪ್ರಲಾಪವೇ! ಹಿಂದೂಗಳು ನಾನು ಬಾವಿಗೆ ಹಾರಲು ಹೇಳಿದರೂ ಸಿದ್ಧರಿದ್ದಾರೆ ಎನ್ನುತ್ತಾ ಅವರಿಗೆ ಬಿಟ್ಟಿ ಉಪದೇಶ! ಮುಸ್ಲಿಮರು ಶತ್ರುವೆಂದು ಪರಿಗಣಿಸಿದ ಕಾರಣ ಅವರಿಗೆ ಅಹಿಂಸೆಯ ಉಪದೇಶ ಮಾಡುವುದಿಲ್ಲವೇ? ಅಹಿಂಸೆಯ ಅರ್ಥವೇ ಸತ್ತು ಹೋಯಿತು! ಶತ್ರುತ್ವ ಮರೆತು ಅಹಿಂಸೆಯನ್ನು ಪಾಲಿಸುವವನ ಎದುರಲ್ಲಿ ಪಶುಗಳೂ ಮಂಡಿಯೂರುತ್ತವೆ ಎಂದ ವಿವೇಕಾನಂದರ ಮಾತೂ ಕಸದ ಬುಟ್ಟಿ ಸೇರಿತು! ಅಥವಾ ಮುಸ್ಲಿಮರು ಪಶುಗಳಿಗಿಂತಲೂ ಕಡೆ! ವಿಪರ್ಯಾಸವೆಂದರೆ ಇಂದು ಜಗತ್ತಿನಲ್ಲಿ ಎರಡೂ ಸತ್ಯವಾಗಿರುವುದು. ಅಹಿಂಸೆಯೆಂದರೆ ಗಾಂಧಿಯದ್ದೇ ಎನ್ನುವ ಮೂರ್ಖ ಪ್ರಪಂಚ. ಪಶುಗಳಿಗಿಂತಲೂ ಕ್ರೂರವಾಗಿ ವರ್ತಿಸುವ ಮತಾಂಧ ಮುಸಲರು! ಈ ತುಂಡುಬಟ್ಟೆ ತೊಟ್ಟ ಮುದುಕನ ಮಾತು ಕೇಳಿ ಹಿಂದೂಗಳು ನಿರ್ವೀರ್ಯರಾದರು. ಮುಸಲ್ಮಾನರು ಸ್ತ್ರೀಯರ ಮೇಲೆ ಅತ್ಯಾಚಾರ ಮಾಡುತ್ತಿದ್ದಾಗಲೂ, ತಮ್ಮವರನ್ನು ಕೊಲ್ಲುತ್ತಿದ್ದಾಗಲೂ ಗಾಂಧಿಯ ಅಹಿಂಸೆಗೆ ಜೋತು ಬಿದ್ದರು.

                   ಒಬ್ಬ ಉನ್ಮತ್ತನ ಕೈಯಲ್ಲಿ ನಾವು ಹೆದರಿಕೆಯಿಲ್ಲದೆ ಉದ್ವೇಗವಿಲ್ಲದೆ ಕೋಪವಿಲ್ಲದೆ ಸಾವನ್ನಪ್ಪಿದರೆ ಅದು ಅವನ ಉನ್ಮಾದವನ್ನು ನಿವಾರಿಸುತ್ತದೆ ಎಂದರು ಮಹಾವೈದ್ಯ ಗಾಂಧಿ! ಹಿಂದೂಗಳನ್ನು ರಕ್ಷಿಸುವ ಭರದಲ್ಲಿ ಮುಸಲರಿಂದ ಮಾರಕ ಇರಿತಕ್ಕೊಳಗಾಗಿ ಸಾವನ್ನಪ್ಪಿದ ಸಚಿನ್ ಮಿತ್ರಾ ಹಾಗೂ ಸ್ಮೃತೀಶ ಬ್ಯಾನರ್ಜಿಯ ಸಾವಿಗೆ ಶೋಕ ವ್ಯಕ್ತಪಡಿಸಲೂ ನಿರಾಕರಿಸಿದರು. ಬದಲಾಗಿ ಸಚಿನ್ ಮಿತ್ರಾರ ಪತ್ನಿಗೆ ನೀವು ಶೋಕಿಸುವ ಬದಲು ಸೇವೆಯಲ್ಲಿ ತೊಡಗಿಕೊಳ್ಳಿ ಎಂದು ಬಿಟ್ಟಿ ಸಲಹೆ ನೀಡಿದರು. ಪಂಜಾಬಿನಲ್ಲಿ ಅತ್ಯಾಚಾರದ ಬೆದರಿಕೆಗೆ ಒಳಗಾದ ಹುಡುಗಿಯರಿಗೆ "ನಿಮ್ಮ ನಾಲಗೆಯನ್ನು ಕಚ್ಚಿಕೊಳ್ಳಿ ಮತ್ತು ಸಾಯುವವರೆಗೆ ಉಸಿರನ್ನು ಬಿಗಿ ಹಿಡಿಯಿರಿ" ಎನ್ನುವ ಹಿತವಚನ ಕೊಟ್ಟರು. ಇದಕ್ಕೂ ಆತ್ಮಹತ್ಯೆಗೂ ಏನು ವ್ಯತ್ಯಾಸವಿದೆ. ಇದು ಮಾಡಲರಿಯದವನ ಪ್ರಲಾಪವೇ ಹೊರತು ಯಾವ ಆದರ್ಶವೂ ಅಲ್ಲ!

ಬುಧವಾರ, ಆಗಸ್ಟ್ 31, 2016

ಯಾರು ಮಹಾತ್ಮ? ಭಾಗ- ೨

ಯಾರು ಮಹಾತ್ಮ? ಭಾಗ- ೨



                   ಆಗ ಕಾಂಗ್ರೆಸ್ಸಿನಲ್ಲಿ ಗಾಂಧಿಯವರದ್ದೇ ಅಂತಿಮ ಮಾತು. ಸರಿತಪ್ಪುಗಳ ವಿಚಾರವಾಗಿ ಅವರ ತೀರ್ಮಾನವೇ ಅಂತಿಮ ನಿರ್ಣಯ! ಅವರ ಮುಖಂಡತ್ವ ಬೇಕೆಂದಾದರೆ ಕಾಂಗ್ರೆಸ್ ಅವರ ನಿರ್ಧಾರಗಳನ್ನು ಒಪ್ಪಬೇಕಿತ್ತು. ಇಲ್ಲದಿದ್ದರೆ ಅವರು ತಮ್ಮದೇ ಹಾದಿ ಹಿಡಿಯುತ್ತಿದ್ದರು. ಹಾಗಾಗಿಯೇ ಕಾಂಗ್ರೆಸ್ ತನ್ನ ಬುದ್ಧಿಯನ್ನು ಅಕ್ಷರಶಃ ಗಾಂಧಿಗೆ ಮಾರಿಕೊಂಡಿತ್ತು. ಗಾಂಧಿಯ ಚಂಚಲತೆ, ನೈತಿಕತೆಯೇ ಆಧ್ಯಾತ್ಮಿಕತೆಯೆಂದು ಸಾಧಿಸುವ ರೀತಿ, ದೂರದೃಷ್ಟಿಯಿಲ್ಲದ-ಪರಿಣಾಮದ ಬಗೆಗೆ ಆಲೋಚಿಸದ ನಡೆಗಳಿಗೆ ಕಾಂಗ್ರೆಸ್ ಹೆಜ್ಜೆಹಾಕಲೇಬೇಕಾದಂತಹ ಪರಿಸ್ಥಿತಿಯಿತ್ತು. ಸತ್ಯಾಗ್ರಹಿ ಎಂದಿಗೂ ವಿಫಲನಾಗುವುದಿಲ್ಲ ಎಂದು ಪದೇ ಪದೇ ತನ್ನ ನಿರ್ಧಾರಗಳನ್ನು ಸಮರ್ಥಿಸಲು ಬಳಸುತ್ತಿದ್ದರು ಗಾಂಧಿ. ಆದರೆ ಸತ್ಯಾಗ್ರಹಿ ಯಾರೆಂದು ಅವರ ಹೊರತು ಬೇರಾರಿಗೂ ತಿಳಿದಿರಲಿಲ್ಲ. ಅವರ ಸತ್ಯಾಗ್ರಹಿಯ ವ್ಯಾಖ್ಯೆ ಕಾಲ-ಸನ್ನಿವೇಶಗಳಿಗೆ ತಕ್ಕಂತೆ ಬದಲಾಗುತ್ತಿತ್ತು.

                 ಗಾಂಧಿಯ ರಾಜಕೀಯ ಅವೈಚಾರಿಕವಾದುದು ಎಂದು ಯೋಚಿಸಿದವರೆಲ್ಲಾ ಒಂದೋ ಕಾಂಗ್ರೆಸ್ ಬಿಟ್ಟು ದೂರಸರಿಯಬೇಕಾಯಿತು ಅಥವಾ ಗಾಂಧಿಯ ಇಷ್ಟಕ್ಕೆ ತಕ್ಕಂತೆ ಕಷ್ಟವಾದರೂ ನಡೆದುಕೊಳ್ಳಬೇಕಾಯಿತು. ಗಾಂಧಿಯವರ ಹಠಮಾರಿತನ-ಬೇಜವಾಬ್ದಾರಿ-ಪ್ರಮಾದಗಳ ಮೇಲೆ ಪ್ರಮಾದ-ವಿಫಲತೆಗಳಿಂದ ದುರಂತಗಳ ಮೇಲೆ ದುರಂತಗಳಾದವು. 33 ವರ್ಷಗಳ ರಾಜಕೀಯ ಜೀವನದಲ್ಲಿ ಗಾಂಧಿ ಸಾಧಿಸಿದ್ದೇನು? ಒಡೆದ ಭಾರತವೇ? ಲಕ್ಷಗಟ್ಟಲೆ ಹಿಂದೂಗಳ ಕೊಲೆಯೇ? ಸ್ವಾರ್ಥಿ, ಚಪಲಚೆನ್ನಿಗರಾಯ ನೆಹರೂ ಎಂಬ ಉತ್ತರಾಧಿಕಾರಿಯೇ? ಅವರ ಪಟ್ಟ ಶಿಷ್ಯ ನೆಹರೂಗೇ ಗಾಂಧಿಯ ಮುಂದಿನ ನಡೆ ಏನು, ಏಕಾಗಿ ಎನ್ನುವುದರ ಅರಿವಿರಲಿಲ್ಲ. ನೆಹರೂ  ಅತ್ತಲಿರಲಿ ಸ್ವತಃ ಗಾಂಧಿಗೇ ತಾನು ಮುಂದೇನು ಮಾಡುತ್ತೇನೆ ಎನ್ನುವುದರ ಖಚಿತತೆಯಿರಲಿಲ್ಲ. "ನಮ್ಮ ಮೇಲೆ ಅಚ್ಚರಿಯ ಮಳೆ ಸುರಿಸುವುದರಿಂದ ಹೆದರಿಕೆಯಾಗುತ್ತದೆ ಎಂದು ನಾನವರಿಗೆ ಹೇಳಿದ್ದೆ(1931). ಹದಿನಾಲ್ಕು ವರ್ಷಗಳಿಂದ ಅವರ ಒಡನಾಡಿಯಾಗಿದ್ದರೂ ಅವರನ್ನು ಅರ್ಥ ಮಾಡಿಕೊಳ್ಳಲಾಗಲಿಲ್ಲ. ತಮ್ಮಲ್ಲಿ ತಿಳಿಯದಿರುವಿಕೆಯ ಅಸ್ತಿತ್ವವಿದೆ ಎನ್ನುವುದು ಸ್ವತಃ ಅವರಿಗೂ ಗೊತ್ತಿತ್ತು. ಸ್ವತಃ ತಾನು ಅದಕ್ಕೆ ಉತ್ತರ ಕೊಡಲಾರೆ. ಮತ್ತು ಇದು ತನ್ನನ್ನು ಎಲ್ಲಿಗೆ ಒಯ್ಯುತ್ತದೆ ಎಂದು ಹೇಳಲಾರೆ ಎನ್ನುತ್ತಿದ್ದರು" ಎಂದು ನೆಹರೂ ಮಹಾಶಯ ಬರೆದಿಟ್ಟಿದ್ದಾರೆ.

              ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಆಚಾರ್ಯ ಕೃಪಲಾನಿ ಗಾಂಧಿ ಜೊತೆ ಸುಮಾರು 30 ವರ್ಷಗಳ ಕಾಲ ಕೆಲಸ ಮಾಡಿದವರು. ಗಾಂಧಿಯ ಬಗ್ಗೆ ಅವರ ಅಭಿಪ್ರಾಯ:- "ಸಾಮೂಹಿಕ ಆಧಾರದಲ್ಲಿ ಸಮಸ್ಯೆಗಳನ್ನು ಬಗೆಹರಿಸುವ ಹಾದಿಯನ್ನು ಗಾಂಧಿ ಇನ್ನೂ ಕಂಡುಕೊಂಡಿಲ್ಲ. ಅವರು ಅಹಿಂಸೆ-ಅಸಹಕಾರದ ನಿಶ್ಚಿತ ಪಥ ತೋರಿದಾಗ ನಾವದನ್ನು ಕನಿಷ್ಟ ಯಾಂತ್ರಿಕವಾಗಿಯಾದರೂ ಪಾಲಿಸಿದೆವು. ಆದರೆ ಇಂದು ಸ್ವತಃ ಅವರು ಕತ್ತಲಲ್ಲಿ ತಡಕಾಡುತ್ತಿದ್ದಾರೆ. ಅವರು ಇಡೀ ಭಾರತಕ್ಕಾಗಿ ಬಿಹಾರದಲ್ಲಿ ಹಿಂದೂ-ಮುಸ್ಲಿಮ್ ಸಮಸ್ಯೆ ಬಗೆಹರಿಸುತ್ತಿರುವುದಾಗಿ ಹೇಳುತ್ತಿದ್ದರು. ಆದರೆ ಉದ್ದೇಶಿತ ಗುರಿಯತ್ತ ಒಯ್ಯುವ ಖಚಿತ ಮಾರ್ಗಗಳೇ ಅವರಲ್ಲಿರಲಿಲ್ಲ. ಅವರು ತಮ್ಮ ನೀತಿಗಳನ್ನೇನೋ ಹೇಳುತ್ತಾರೆ. ಆದರೆ ಅದನ್ನು ಕಾರ್ಯರೂಪಕ್ಕೆ ತರಲು ಅವರಿಂದಾಗುವುದಿಲ್ಲ. ಮೊಮ್ಮಗಳು ಮನು ಜೊತೆ ಹಾಸಿಗೆ ಹಂಚಿಕೊಳ್ಳುವ ಕುರಿತಂತೆ ಅದು ತಮ್ಮ ಬ್ರಹ್ಮಚರ್ಯ ಯಜ್ಞದ ಒಂದು ಭಾಗ ಎಂದು ಗಾಂಧಿ ಹೇಳಿದ್ದರು. ಆಗ ಕೃಪಲಾನಿ "ಯಾವುದೇ ಪಾಪಿಷ್ಟ ವ್ಯಕ್ತಿ ಕೂಡಾ ನೀವು ಮಾಡಿದಂತೆ ಮಾಡುವುದಿಲ್ಲ " ಎಂದು ಪ್ರತಿಕ್ರಿಯಿಸಿದ್ದರು. ಅರವಿಂದರಂತೂ "ಗಾಂಧಿ ಮಾಡುತ್ತಿರುವುದಾದರೂ ಏನು? "ಅಹಿಂಸಾ ಪರಮೋ ಧರ್ಮ, ಜೈನ ಮತ, ಹರತಾಳ, ಸಾತ್ವಿಕ ಪ್ರತಿರೋಧ ಇತ್ಯಾದಿಗಳ ಸತ್ಯಾಗ್ರಹ ಎನ್ನುವ ಕಲಸುಮೇಲೋಗರ. ಅವರು ತರುತ್ತಿರುವುದು ಭಾರತೀಯಕರಣಗೊಳಿಸಿದ ಟಾಲ್ ಸ್ಟಾಯ್ ವಾದ. ಅದು ದೀರ್ಘಕಾಲ ಉಳಿದರೆ ಭಾರತೀಯಕರಣಕ್ಕೊಳಗಾದ ಬೋಲ್ಷೆವಿಕ್ ವಾದವಾಗಬಹುದು. ಆತನ ಕಾರ್ಯ ನೈಜವಾದುದಲ್ಲ" ಎಂದಿದ್ದರು. 1926ರಲ್ಲಿ, "ಗಾಂಧಿಯ ಚಳುವಳಿ ಅಭಾಸಕ್ಕೂ ಗೊಂದಲಕ್ಕೂ ಕಾರಣವಾಗುತ್ತದೆಯೆಂದು ಮೊದಲೇ ಹೇಳಿದ್ದೆ. ಅದೇ ರೀತ್ಯಾ ಆಗಿದೆ" ಎಂದು ಹೇಳಿದ್ದರು ಅರವಿಂದರು.

               ಲಾಲಾ ಲಜಪತ್ ರಾಯರನ್ನು ಲಾಠಿಯಲ್ಲಿ ಸಾಯಬಡಿದು ಅವರ ಕೊಲೆಗೆ ಕಾರಣರಾದವರ ಮೇಲೆ ಸೇಡು ತೀರಿಸಿಕೊಳ್ಳುವ ಉದ್ದೇಶದಿಂದ ಹೊರಟು ಚಂದ್ರಶೇಖರ ಆಜಾದ್ ನೇತೃತ್ವದ ಕ್ರಾಂತಿಕಾರಿಗಳು ಸ್ಯಾಂಡರ್ಸ್ ನನ್ನು ವಧಿಸಿದಾಗ ಇಡೀ ದೇಶ ಸಂಭ್ರಮಿಸಿತ್ತು. ಆದರೆ ಗಾಂಧಿ ಅದನ್ನು ಹೇಡಿತನದ ಕೃತ್ಯ ಎಂದು ಬಣ್ಣಿಸಿದರು. 1931ರಲ್ಲಿ ಕರಾಚಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಭಗತ್ ಸಿಂಗ್ ಹಾಗೂ ಸಹಸದಸ್ಯರು ಅಸೆಂಬ್ಲಿ ಮೇಲೆ ಬಾಂಬ್ ಹಾಕಿದಾಗ ಪ್ರದರ್ಶಿಸಿದ ಧೈರ್ಯ ಮತ್ತು ಬಲಿದಾನದ ಸ್ಪೂರ್ತಿಯನ್ನು ಶ್ಲಾಘಿಸುವ ನಿರ್ಣಯವನ್ನು ಬಹಿರಂಗ ಅಧಿವೇಶನದಲ್ಲಿ ಸ್ವೀಕರಿಸಲಾಯಿತು. ಗಾಂಧಿ ಇದನ್ನು ಬಲವಾಗಿ ವಿರೋಧಿಸಿದರು. ಅದಕ್ಯಾರೂ ಸೊಪ್ಪು ಹಾಕಲಿಲ್ಲ. ಆದರೆ ಗಾಂಧಿ ಆ ಸೋಲನ್ನು ಮರೆಯಲಿಲ್ಲ. ಇದಾಗಿ ಕೆಲ ತಿಂಗಳಲ್ಲಿ ಬಾಂಬೆಯ ಉಸ್ತುವಾರಿ ಗವರ್ನರ್ ಹಟ್ಸನ್ ನನ್ನು ಗೋಗಟೆ ಎಂಬ ಕ್ರಾಂತಿಕಾರಿ ಗುಂಡಿಟ್ಟು ಯಮಸದನಕ್ಕಟ್ಟಿದ. ಇದನ್ನೇ ತನ್ನ ಉತ್ಕರ್ಷಕ್ಕೆ ಬಳಸಿಕೊಂಡ ಗಾಂಧಿ ಕರಾಚಿ ಅಧಿವೇಶನದಲ್ಲಿ ಭಗತನನ್ನು ಶ್ಲಾಘಿಸಿ ತೆಗೆದುಕೊಂಡ ನಿರ್ಣಯವೇ ಗೋಗಟೆ ಹಟ್ಸನ್ ನನ್ನು ಕೊಲ್ಲಲು ಮೂಲ ಪ್ರೇರಣೆ ಎಂದು ಅಖಿಲ ಭಾರತೀಯ ಕಾಂಗ್ರೆಸ್ ಸಭೆಯಲ್ಲಿ ತಿರುಗೇಟು ನೀಡಿದರು. ಅಸಂಖ್ಯಾತ ಜನ ಸೇರಿದ್ದ ಸಭೆಯಲ್ಲಿ ಗಾಂಧಿಯವರ ದಿಗ್ಭ್ರಮೆಗೊಳಿಸುವ ಈ ಹೇಳಿಕೆಯನ್ನು ಪ್ರಶ್ನಿಸಿ ಅಸಮಧಾನ ವ್ಯಕ್ತಪಡಿಸಿದವರು ಸುಭಾಷ್ ಚಂದ್ರ ಬೋಸ್ ಒಬ್ಬರೇ! ಭಗತ್ ಸಿಂಗ್ ಮತ್ತು ಇತರ ದೇಶಭಕ್ತರ  ಜೀವ ರಕ್ಷಿಸುವ ಮನವಿಗೆ ಸಹಿ ಹಾಕಲು ಗಾಂಧಿ ಒಪ್ಪಲಿಲ್ಲ. ಅವರೆಲ್ಲಾ ಹಿಂಸೆಯಲ್ಲಿ ಭಾಗವಹಿಸಿದ್ದರು ಎನ್ನುವುದು ಗಾಂಧಿಯ ಈ ನಿಲುವಿಗೆ ಕಾರಣ. ಆದರೆ ಇದೇ ಗಾಂಧಿ ದೇಶಭಕ್ತ ವೀರ ಸಂನ್ಯಾಸಿ ಸ್ವಾಮಿ ಶೃದ್ಧಾನಂದರನ್ನು ಕೊಲೆ ಮಾಡಿದ ಪಾತಕಿ ರಷೀದನನ್ನು "ಸಹೋದರ" ಎಂದು ಕರೆದರು. ಮಾತ್ರವಲ್ಲ ಆತನ ಪರವಾಗಿ ವಾದಿಸಲೂ ಸಿದ್ಧರಾದರು.

                ಕೇವಲ ಕ್ರಾಂತಿಯ ಮಾರ್ಗವನ್ನನುಸರಿಸಿದವರನ್ನು ಮಾತ್ರ ಗಾಂಧಿ ವಿರೋಧಿಸಲಿಲ್ಲ. ಅವರ ಬೂಟಾಟಿಕೆಯನ್ನು ಒಪ್ಪದವರನ್ನೂ ವಿರೋಧಿಸಿದರು. ತಾವು ಒಪ್ಪದವರನ್ನು ಅವರು ಇಷ್ಟಪಡುತ್ತಿರಲಿಲ್ಲ ಎನ್ನುವುದಕ್ಕೆ ಸುಭಾಷ್ ಪ್ರಕರಣವೇ ಸಾಕ್ಷಿ. 1934ರ ಬಳಿಕ ಮಹಾ ವಿರಕ್ತಿ ಭಾವ ಪ್ರದರ್ಶಿಸುತ್ತಾ ತಾನು ಕಾಂಗ್ರೆಸ್ ಪಕ್ಷದ ನಾಲ್ಕಾಣೆ ಸದಸ್ಯನೂ ಅಲ್ಲವೆಂದೂ, ತಮಗೆ ಇದು ಸಂಬಂಧಿಸಿದ್ದಲ್ಲವೆಂದು ಪದೇ ಪದೇ ಹೇಳುತ್ತಿದ್ದ ಗಾಂಧಿ ಬೋಸ್ ಎರಡನೆಯ ಬಾರಿಗೆ ಕಾಂಗ್ರೆಸ್ ಅಧ್ಯಕ್ಷರಾಗುವುದನ್ನು ತಡೆಯಲು ತನ್ನ ಚೇಲಾ ಪಟ್ಟಾಭಿ ಸೀತಾರಾಮಯ್ಯರನ್ನು ಬೋಸ್ ಎದುರಾಗಿ ನಿಲ್ಲಿಸಿದರು. ಗಾಂಧಿಯ ಕೃಪಾಕಟಾಕ್ಷ ಪಟ್ಟಾಭಿಯ ಕಡೆಯಿದ್ದಾಗ್ಯೂ ಬೋಸ್ ಗಣನೀಯ ಬಹುಮತ ಪಡೆದು ಗೆದ್ದರು. ಪಟ್ಟಾಭಿಯವರ ತವರು ಪ್ರಾಂತ್ಯ ಆಂಧ್ರಪ್ರದೇಶದಲ್ಲೂ ಬೋಸರಿಗೆ ಅವರಿಗಿಂತ ಹೆಚ್ಚಿನ ಮತ ಸಿಕ್ಕಿತ್ತು. ಕ್ರುದ್ಧರಾದ ಗಾಂಧಿ ಪಟ್ಟಾಭಿಯವರ ಸೋಲು ತನ್ನ ಸೋಲೆಂದು ಪ್ರತಿಕ್ರಿಯಿಸಿದರು. ಮುಂದಿನ ತ್ರಿಪುರಾ ಕಾಂಗ್ರೆಸ್ ಅಧಿವೇಶನದಲ್ಲೂ ಭಾಗವಹಿಸದೆ ಹಠ ಸಾಧಿಸಿದರು. ಪೂರ್ತಿ ಕೀಟಲೆಯ ಉಪವಾಸದ ಮೂಲಕ ರಾಜ್ ಕೋಟದಲ್ಲಿ ಪ್ರತಿಯಾಗಿ ಷೋ ನಡೆಸಿದರು. ಬೋಸ್ ಮೇಲಿನ ದ್ವೇಷದಿಂದ ಹನ್ನೆರಡು ಜನರನ್ನು ಕಾರ್ಯಕಾರಿಣಿಗೆ ರಾಜೀನಾಮೆ ನೀಡುವಂತೆ ಮಾಡಿದರು ಗಾಂಧಿ. ಅವರಲ್ಲಿ ಈ ಕಚ್ಛೆಹರುಕ ನೆಹರೂವೂ ಒಬ್ಬ. ಗಾಂಧಿ ಬೋಸ್ ಜೊತೆ ಕೆಲಸ ಮಾಡಲು ಒಪ್ಪಲಿಲ್ಲ. ಸುಭಾಷರನ್ನು  ಬಗೆಬಗೆಯಾಗಿ ನಿಂದಿಸಿದರು. ಇದೆಲ್ಲದರಿಂದ ಬೇಸತ್ತ ಸುಭಾಷರು ಅಧ್ಯಕ್ಷ ಸ್ಥಾನಕ್ಕೂ, ಕಾರ್ಯಕಾರಿಣಿಗೂ ರಾಜೀನಾಮೆ ನೀಡಿ ಹೊರನಡೆದರು. ಮುಂದೆ ಜಗತ್ತೇ ಮೂಗಿನ ಮೇಲೆ ಬೆರಳಿಟ್ಟ ಸಾಹಸಕ್ಕೆ ಸೂತ್ರಧಾರಿಯೂ-ಪಾತ್ರಧಾರಿಯೂ ಆದರು. ಸುಭಾಷರನ್ನು ಅಧ್ಯಕ್ಷಗಾದಿಯಿಂದ ತೆಗೆದುಹಾಕುವವರೆಗೆ ಗಾಂಧಿಯ ಮತ್ಸರ - ಕೋಪ ತಣಿದಿರಲಿಲ್ಲ. ಬ್ರಿಟಿಷ್ ಸರಕಾರ ಬೋಸರನ್ನು ಆರು ವರ್ಷ ದೇಶಭೃಷ್ಟಗೊಳಿಸಿದ್ದಕ್ಕೆ ಕನಿಷ್ಟ ವಿರೋಧವನ್ನೂ ಅವರು ವ್ಯಕ್ತಪಡಿಸಲಿಲ್ಲ.


ಬುಧವಾರ, ಆಗಸ್ಟ್ 24, 2016

ಯಾರು ಮಹಾತ್ಮ? ಭಾಗ-೧

ಯಾರು ಮಹಾತ್ಮ? 
ಭಾಗ-೧

             "ರಾಷ್ಟ್ರ"ದ ಮಹತ್ವ ತಿಳಿಯದವರು, ತಾಯಿನಾಡಿನ ಅರ್ಥ ತಿಳಿಯದವರು ಗಾಂಧಿಗೆ ಕಣ್ಣುಮುಚ್ಚಿ ರಾಷ್ಟ್ರಪಿತ ಎನ್ನುವ ಪಟ್ಟ ಕಟ್ಟಿಬಿಟ್ಟಾಗಿದೆ. ಅವರ ಭಕ್ತರು ಅಥವಾ ಅವರ ಹೆಸರಿನಡಿ ತಮ್ಮ ದಂಧೆ ನಡೆಸುವವರಿಗೆ ಆತ ಮಹಾತ್ಮ! ಇತಿಹಾಸವನ್ನು ಸರಿಯಾಗಿ ತಿಳಿದುಕೊಳ್ಳದ, ಅವರ ಮನಸ್ಸು-ಮಾತು-ಕೃತಿಗಳನ್ನು ಸರಿಯಾಗಿ ವಿಮರ್ಷಿಸದ ಹಲವರಿಗೂ ಆತ ಮಹಾತ್ಮ! ಉಪ್ಪು, ಚರಕಗಳಂಥ ಸಾಮಾನ್ಯ ವಸ್ತುಗಳನ್ನು ಬಳಸಿಕೊಂಡೇ ಪ್ರತಿಭಟನೆಯ ಸಂಕೇತವನ್ನಾಗಿಸಿದ ಈ ಅರೆನಗ್ನ ಫಕೀರನನ್ನು ಹೊಗಳಿ ಅಟ್ಟಕ್ಕೇರಿಸಿದವರಿಗೆ, ಆತ ಹೇಳಿದ ಆದರ್ಶವನ್ನು ಕಟ್ಟುನಿಟ್ಟಾಗಿ ಪಾಲಿಸಿ ನೈಜ ಗಾಂಧಿ ಅನ್ನಿಸಿಕೊಂಡವರಿಗೆ ಲೆಖ್ಖವೇ ಇಲ್ಲ. ಆದರೆ ನಿಜವಾಗಿ ಗಾಂಧಿ ಹಾಗೆ ಇದ್ದರೇ? ನಿಜವಾಗಿಯೂ ಆತ ಮಹಾತ್ಮ ಹೌದೇ ಎನ್ನುವುದನ್ನು ವಿಶ್ಲೇಷಿಸಬಾರದೆಂದೇನೂ ಇಲ್ಲವಲ್ಲ. ಭುವಿಗಿಳಿದ ದೇವರಾದ ರಾಮ-ಕೃಷ್ಣರನ್ನೇ ವಿಚಾರಣೆಗೆ ಒಳಪಡಿಸುವ ಈ ಭಾರತದಲ್ಲಿ ಯಕಃಶ್ಚಿತ್ ಮನುಷ್ಯನೊಬ್ಬನನ್ನು ವಿಶ್ಲೇಷಿಸಿದರೆ ತಪ್ಪೇನು? ಗೆಳೆಯರೊಬ್ಬರ ಪ್ರಶ್ನೆಗಳಿಗೆ ಉತ್ತರವಾಗಿ ಈ ಸರಣಿ ಲೇಖನಕ್ಕೆ ಮುಂದಾಗುತ್ತಿದ್ದೇನೆ. ಪರ-ವಿರೋಧದ ಕಾಮೆಂಟುಗಳು ಸಭ್ಯತೆಯ ಎಲ್ಲೆ ದಾಟದಿರಲಿ-ವಸ್ತುನಿಷ್ಠವಾಗಿರಲಿ.

              ಇತಿಹಾಸ ಕುರುಡು ದೇವರಲ್ಲ. ಬೇರೆಯವರ ಕುರುಡುತನವನ್ನು ಅದು ಕ್ಷಮಿಸುವುದೂ ಇಲ್ಲ. ಇತಿಹಾಸದ ಭಾಗವನ್ನು ನಿರ್ವಹಿಸುವ ವ್ಯಕ್ತಿ ಇತಿಹಾಸಕ್ಕೆ ಸೇರಿ ಬಿಡುತ್ತಾನೆ. ಹಾಗೆಯೇ ಇತಿಹಾಸವನ್ನು ಮರೆತ ಜನಾಂಗ ಇತಿಹಾಸವೇ ಆಗಿಬಿಡುತ್ತದೆ! "ಯಾವ ವ್ಯಕ್ತಿ ಕಾಯಾ-ವಾಚಾ-ಮನಸಾ ಒಂದೇ ರೀತಿ ಇರುತ್ತಾನೋ ಅವನು ಮಾತ್ರ ಮಹಾತ್ಮ". ಇದರ ಅರ್ಥ ಅರಿತವರ್ಯಾರೂ ಗಾಂಧಿಯನ್ನು ಮಹಾತ್ಮ ಎಂದು ತಪ್ಪಿಯೂ ಕರೆಯಲಾರರು. ಅತ್ತ ಭಾರತ ವಿಭಜನೆ ಯೋಜನೆ ಹೊತ್ತು ವೈಸ್ ರಾಯ್ ಲಂಡನ್ ಬಿಟ್ಟು ಹೊರಟಿದ್ದ. ಅದೇ ಸಂಜೆ ಇತ್ತ ಗಾಂಧಿ ತಮ್ಮ ಪ್ರಾರ್ಥನಾ ಸಭೆಯಲ್ಲಿ "ಬೇಕಾದರೆ ಇಡೀ ದೇಶ ಹೊತ್ತಿ ಉರಿಯಲಿ; ನಾವು ಪಾಕಿಸ್ತಾನದ ಒಂದಿಂಚೂ ಜಾಗಕ್ಕೂ ಒಪ್ಪಿಗೆ ಕೊಡುವುದಿಲ್ಲ" ಎಂದು ಗುಡುಗಿದರು. ಹೀಗೆ ಅಬ್ಬರಿಸಿದ್ದ ಗಾಂಧಿ 1947ರ ಜೂನ್ 2 ರಂದು ವೈಸ್ ರಾಯ್ ಭೇಟಿ ಮಾಡಬೇಕಾಯಿತು. ಭೇಟಿಗೆ ಮುನ್ನ ಇತರ ನಾಯಕರ ಜೊತೆ ಒಂದೂವರೆ ಗಂಟೆಗಳಿಗೂ ಹೆಚ್ಚುಕಾಲ ಚರ್ಚೆ ನಡೆಸಿದ್ದರು. ಅತಿ ನಿರೀಕ್ಷೆಯ ಹಾಗೂ ಬಹು ಪ್ರಮುಖವಾದ ಎಲ್ಲ ಭಾರತೀಯರ ಪ್ರತಿಕ್ರಿಯೆಗೆ ದನಿ ನೀಡುವ ಹೊಣೆಗಾರಿಕೆ ಅವರದಾಗಿತ್ತು. ಮಧ್ಯಾಹ್ನ 12.30ರ ಸುಮಾರಿಗೆ ವೈಸ್ ರಾಯ್ ಕೊಠಡಿ ಪ್ರವೇಶಿಸಿದರು ಗಾಂಧಿ. ಮೌಂಟ್ ಬ್ಯಾಟನ್ ಕುರ್ಚಿಯಿಂದ ಎದ್ದು ಹೋಗಿ ನಗುತ್ತಾ ಹೃದಯಪೂರ್ವಕ ಸ್ವಾಗತ ಕೋರಿದ. ಪ್ರತಿಯಾಗಿ ಗಾಂಧಿ ತಾಯಿ ಮಗುವನ್ನು ಹೆದರಿಸುವ ರೀತಿ ತಮ್ಮ ಬಲಗೈ ತೋರುಬೆರಳನ್ನು ತುಟಿ ಮೇಲೆ ಹಿಡಿದರು. ಮೌಂಟ್ ಬ್ಯಾಟನ್ನಿಗೆ ಅರ್ಥವಾಯಿತು. ಅಂದು ಸೋಮವಾರ; ಗಾಂಧಿಯು ಮೌನವಿರುವ ದಿನ!

                 ಆರಾಮ ಕುರ್ಚಿಯಲ್ಲಿ ಕುಳಿತ ಗಾಂಧಿ ಲಕೋಟೆಗಳ ಕಟ್ಟೊಂದನ್ನು ತೆಗೆದು ಮೌಂಟ್ ಬ್ಯಾಟನ್ನಿನ ವಿಭಜನೆಯ ಯೋಜನೆಯನ್ನು ಕೇಳುತ್ತಾ ಕುಳಿತರು. ಎರಡಿಂಚು ಉದ್ದದ ಮೋಟು ಪೆನ್ಸಿಲನ್ನು ಒಮ್ಮೆ ನಾಲಗೆಗೆ ತಾಗಿಸಿ ಹಳೆ ಲಕೋಟೆಗಳ ಹಿಂಬದಿಯಲ್ಲಿ "ನನ್ನನ್ನು ಕ್ಷಮಿಸಿ, ನಾನು ಮಾತಾಡಲಾರೆ. ನಾನು ಸೋಮವಾರ ಮೌನ ವ್ರತ ಆಚರಿಸುವ ನಿರ್ಧಾರ ಮಾಡಿದಾಗ, ಅದನ್ನು ಪಾಲಿಸದಿರಲು ಎರಡು ಅಪವಾದಗಳನ್ನು ಇಟ್ಟುಕೊಂಡಿದ್ದೆ. ಒಂದು ಉನ್ನತ ಅಧಿಕಾರಸ್ಥರ ಜೊತೆ ತುರ್ತು ವಿಷಯಗಳನ್ನು ಮಾತಾಡುವಾಗ; ಇನ್ನೊಂದು ರೋಗಿಗಳನ್ನು ಭೇಟಿ ಮಾಡಬೇಕಾದಾಗ. ಆದರೆ ನೀವು ನನ್ನ ಮೌನ ಮುರಿಯಲು ಬಯಸುವುದಿಲ್ಲ ಎನ್ನುವುದು ನನಗೆ ಗೊತ್ತಿದೆ. ನಾನು ಮಾತಾಡಲೇ ಬೇಕಾದ ಒಂದೆರಡು ಸಂಗತಿಗಳಿವೆ. ಆದರೆ ಇಂದಲ್ಲ. ನಾವು ಮತ್ತೊಮ್ಮೆ ಭೇಟಿಯಾದರೆ ಆಗ ಮಾತಾಡುವೆ" ಎಂದು ಬರೆದು ಗಾಂಧಿ ಹೊರಬಂದರು. ಮೌಂಟ್ ಬ್ಯಾಟನ್ ಆ ಕಾಗದಗಳನ್ನು ಜೋಪಾನವಾಗಿ ಎತ್ತಿಟ್ಟುಕೊಂಡ. ಅವು ಚರಿತ್ರೆಯ ಭಾಗವಾಯಿತು. ಆದರೆ ಚರಿತ್ರೆ ಬರೆದವರ್ಯಾರೂ ಗಾಂಧಿಯ ಈ ನಡೆಯನ್ನು ಪ್ರಶ್ನಿಸಲೇ ಇಲ್ಲ!

            ವೈಸ್ ರಾಯ್ ದೇಶವಿಭಜನೆಯ ಯೋಜನೆ ವಿವರಿಸಿದಾಗ ಗಾಂಧಿ ತುಟಿಪಿಟಿಕ್ಕೆನ್ನಲಿಲ್ಲ! ವೈಸ್ ರಾಯ್ ಭೇಟಿಗೆ ಮುನ್ನ ಉಳಿದ ನಾಯಕರೊಡನೆ 90 ನಿಮಿಷಗಳ ಕಾಲ ಚರ್ಚೆ ಮಾಡಿದ್ದ ಗಾಂಧಿ ಅದನ್ಯಾವುದನ್ನೂ ವೈಸ್ ರಾಯ್ ಮುಂದೆ ಹೇಳಲೇ ಇಲ್ಲ! ಕನಿಷ್ಟ ತನ್ನ ಮನಸ್ಸಿನಲ್ಲಿದ್ದುದನ್ನೂ ಹೇಳಲಿಲ್ಲ. ವಿಭಜನೆಯಿಂದ ದೇಶವನ್ನು ರಕ್ಷಿಸುವುದಕ್ಕಿಂತ ಗಾಂಧಿಗೆ ತನ್ನ ಮೌನ ವ್ರತವೇ ಮೇಲಾಯಿತು! ಮೂಟೆಗಟ್ಟಲೆ ಕಾಗದ ಹೊತ್ತೊಯ್ದಿದ್ದ ಗಾಂಧಿ ಕೊನೆ ಪಕ್ಷ ಬರವಣಿಗೆಯ ಮುಖಾಂತರವಾದರೂ ಜನರ ಅಭಿಪ್ರಾಯವನ್ನು ಹೇಳಬಹುದಿತ್ತು. ಕನಿಷ್ಟ ಅದನ್ನೂ ಮಾಡಲಿಲ್ಲ. ಅಪವಾದಾತ್ಮಕ ಸನ್ನಿವೇಶದಲ್ಲಿ ತನ್ನ ಮೌನ ವ್ರತವನ್ನು ಮುರಿಯಬಲ್ಲೆ ಎಂದು ಹೇಳಿದ್ದ ಗಾಂಧಿ ಅದನ್ನು ಪಾಲನೆ ಮಾಡಲಿಲ್ಲ. ತುರ್ತು ವಿಚಾರಗಳ ಬಗೆಗೆ ಉನ್ನತ ಅಧಿಕಾರಸ್ಥರ ಜೊತೆ ಮಾತಾಡುವಾಗ ಮೌನ ಮುರಿಯಬಲ್ಲೆ ಎಂದಿದ್ದ ಗಾಂಧಿಗೆ ವಿಭಜನೆಯ ಯೋಜನೆ ತುರ್ತು ವಿಚಾರ ಅನ್ನಿಸಲಿಲ್ಲವೇ? ಅಥವಾ ವೈಸ್ ರಾಯ್ ತುಂಡು ಬಟ್ಟೆ ತೊಟ್ಟು ತನ್ನ ಹಠಕ್ಕೆ ದೇಶವನ್ನು ಬಲಿ ಕೊಟ್ಟ ಯಕಶ್ಚಿತ್ ನಾಯಕನ ಮೌನ ಮುರಿಯುವಷ್ಟು "ಉನ್ನತ ಅಧಿಕಾರಿ"ಯಾಗಿರಲಿಲ್ಲವೇ? ರೋಗಿಗಳನ್ನು ಭೇಟಿ ಮಾಡಬೇಕಾದಾಗಲೂ ಮೌನ ಮುರಿಯುತ್ತೇನೆ ಅಂದಿದ್ದರು ಗಾಂಧಿ.  ರಕ್ತ ಸೋರುತ್ತಿರುವ, ದೇಹವೇ ತುಂಡಾಗುತ್ತಿರುವ ಭಾರತ ಮಾತೆ ರೋಗದಿಂದ ಬಳಲುತ್ತಿದ್ದಂತೆ ಬೆಂಬಲಿಗರಿಂದ "ಸಂತ" ಎಂದು ಹೊಗಳಿಸಿಕೊಂಡ ವ್ಯಕ್ತಿಯ ದಿವ್ಯದೃಷ್ಟಿಗೆ ಗೋಚರಿಸಲಿಲ್ಲವೆ?

             ಮತ್ತೊಮ್ಮೆ ಭೇಟಿಯಾದರೆ ಒಂದೆರಡು ವಿಷಯಗಳನ್ನು ಮಾತಾಡುವೆ ಎಂದು ಬರೆದು ಬಂದ ಗಾಂಧಿಗೆ ಮತ್ತೆ ಅವಕಾಶ ಸಿಗುವ ಖಚಿತತೆಯೂ ಇರಲಿಲ್ಲ. ದೇಶೀಯರ ಭಾವನೆಯನ್ನು ಹೇಳಬೇಕಾದ ಗಾಂಧಿ ಮೌನಿಯಾದ. ನಾಯಕರ ಜೊತೆ ಮಾಡಿದ ಚರ್ಚೆ ಪಾತಾಳ ಸೇರಿತು. ಸಿಕ್ಕ ಸಂದರ್ಭವನ್ನು ಯಶಸ್ವಿಯಾಗಿ ಉಪಯೋಗಿಸಿಕೊಳ್ಳದ ಗಾಂಧಿಯದ್ದು ವಿಫಲ ನಾಯಕತ್ವವೇ ಸರಿ. ಅವರಿಗೆ ದೇಶಕ್ಕಿಂತ ತನ್ನ ಸ್ವಾರ್ಥವೇ ಮಿಗಿಲಾಯಿತು. ಗಾಂಧಿಯ ಮನಸ್ಸಿನಲ್ಲೇನಿತ್ತೋ ಅರಿತವರ್ಯಾರು? ಆದರೆ ರಕ್ತಪಾತವಾದರೂ ಚಿಂತೆಯಿಲ್ಲ; ಭಾರತವನ್ನು ತುಂಡರಿಸಲೊಪ್ಪುವುದಿಲ್ಲ ಎಂದು ಘರ್ಜಿಸಿದ್ದ ಮನುಷ್ಯ ಅದನ್ನು ಕೃತಿಗಿಳಿಸಬೇಕಾಗಿ ಬಂದಾಗ ಅಂಡು ಸುಟ್ಟ ಬೆಕ್ಕಿನಂತೆ ಮೌನವಾದದ್ದೇಕೆ? ಯೋಚನೆ-ಮಾತು-ಕೃತಿ ಈ ಮೂರರಲ್ಲಿಯೂ ಏಕರೂಪತೆಯಿಲ್ಲದ ಮನುಷ್ಯ ಮಹಾತ್ಮನಾಗಲಾರ. ಗಾಂಧಿಯ ಮಾತು ಮತ್ತು ಕೃತಿಗಳಿಗೆಷ್ಟು ಅಂತರ!ಸನ್ನಿವೇಶಕ್ಕೆ ತಕ್ಕಂತೆ ವರ್ತನೆಯಿಲ್ಲದಿದ್ದ ಮೇಲೆ ಆತ ನಾಯಕನಾಗುವುದು ಹೇಗೆ? ಇತಿಹಾಸವನ್ನೇ ಸೃಷ್ಟಿ ಮಾಡಿದ್ದ ಒಂದು ಸನ್ನಿವೇಶದಲ್ಲಿ ಕಾಗದದ ಚೂರುಗಳ ಮೇಲೆ ತನ್ನ ವ್ರತದ ಬಗ್ಗೆ ವೃಥಾ ಕೊಚ್ಚಿಕೊಂಡ ಗಾಂಧಿ ಮಹಾತ್ಮ ಬಿಡಿ ನಾಯಕನೆನಿಸಿಕೊಳ್ಳಲೂ ಯೋಗ್ಯರಲ್ಲ. ದೇಶಕ್ಕೆ ಭದ್ರತೆ ಸಿಗಬೇಕಾದರೆ ಬ್ರಾಹ್ಮ-ಕ್ಷಾತ್ರಗಳು ಒಟ್ಟಾಗಬೇಕು. ಬ್ರಾಹ್ಮಣನೊಬ್ಬ ಕ್ಷತ್ರಿಯನಾಗಬಹುದು. ಕ್ಷತ್ರಿಯನೊಬ್ಬ ಬ್ರಾಹ್ಮಣನೂ ಆಗಬಹುದು. ಆದರೆ ಕ್ಷತ್ರಿಯನಾಗಿದ್ದುಕೊಂಡು ಸಂನ್ಯಾಸಿಯಾಗುವುದಿದೆಯಲ್ಲ, ಅದರಿಂದ ಹಾನಿ ಶತಃಸಿದ್ಧ! ಅರಸನಾಗಿದ್ದುಕೊಂಡೇ ತನ್ನ ಅಹಿಂಸೆಯೆಂಬ ಮತವನ್ನು ಪ್ರಜೆಗಳ ಮೇಲೆ ಹೇರಹೋದ ಅಶೋಕನಿಂದ ಮೌರ್ಯ ಸಾಮ್ರಾಜ್ಯ ಮಾತ್ರವಲ್ಲ, ಕ್ಷಾತ್ರವೇ ಹ್ರಾಸಗೊಂಡಿತು. ಅತ್ತ ಸಂತನೂ ಅಲ್ಲದ, ಇತ್ತ ಕ್ಷಾತ್ರ ಭಾವವನ್ನೂ ಉದ್ದೀಪಿಸಿಕೊಳ್ಳದ ಗಾಂಧಿಯಂತಹವರಿಗೆ ನಾಯಕತ್ವ ಕೊಟ್ಟು ಭಾರತ ಬಹಳಷ್ಟನ್ನು ಕಳಕೊಂಡಿತು.

ಶುಕ್ರವಾರ, ಜುಲೈ 15, 2016

ಭಾರತೀಯರ ಚಿತ್ತಭಿತ್ತಿಯಲ್ಲೂ "ಅಜೇಯ"ನಾಗುಳಿದ ಪ್ರಳಯರುದ್ರ

ಭಾರತೀಯರ ಚಿತ್ತಭಿತ್ತಿಯಲ್ಲೂ "ಅಜೇಯ"ನಾಗುಳಿದ ಪ್ರಳಯರುದ್ರ


    ವಿಶ್ವನಾಥನ ಮೇಲಿನ ಮೋಹದಿಂದ ಹರಿಯುವುದನ್ನೇ ಮರೆತ ಗಂಗೆ; ಜಟೆಗಟ್ಟಿದಕೂದಲು, ನೆಲಮುಟ್ಟುತ್ತಿರುವ ಗಡ್ದ, ಚಳಿ-ಮಳೆ-ಗಾಳಿಗೆ ಲೆಕ್ಕಿಸದ ಬರೀ ಮೈಯ ತೇಜಸ್ವೀ ಸಾಧುಗಳು, ಕಾಷಾಯ ವಸ್ತ್ರಧಾರಿ ಸಂತ-ಮಹಂತರು, ವಿಭೂತಿ ಬಳಿದು ಓಡಾಡುತ್ತಿರುವ ಸಂನ್ಯಾಸಿಗಳ ಹರ್ ಹರ್ ಮಹಾದೇವ್ ಘರ್ಜನೆ; ಪಂಡಿತರ ವೇದ ಘೋಷ; ತಿಲಕ ಧರಿಸಿ, ಜುಟ್ಟು ಬಿಟ್ಟು, ಕಚ್ಛೆ ಹಾಕಿ ಪಾಠ ಶಾಲೆಗೆ ಹೋಗುತ್ತಿರುವ ವಟುಗಳು-ಪಾಶ್ಚಾತ್ಯ ದಿರಿಸು ಧರಿಸಿ ತರುಣಿಯರನ್ನು ಕೆಣಕುತ್ತಿರೋ ಕಾಲೇಜು ವಿದ್ಯಾರ್ಥಿಗಳು; ಭಿಕ್ಷೆ ಎತ್ತುತ್ತಿರುವವರ ಆರ್ತದನಿಗಳು, ಜೋಳಿಗೆ ದಾಸಯ್ಯರ ಶಂಖ-ಜಾಗಟೆಗಳು, ಶಕುನದವರ ಬುಡಬುಡಿಕೆಗಳು, ಕ್ಷಾತ್ರವನ್ನು ಹ್ರಾಸಗೊಳಿಸುತ್ತಿರುವ ಅಹಿಂಸಾ ಜಾಥಾಗಳು; ಗಂಗೆಯ ತಟ-ವಿಶ್ವನಾಥನ ಮಠದಿಂದ ಮೊಳಗುತ್ತಿರುವ ಶಂಖನಾದದ ನಡುವೆ ಮರಿಸಿಂಹವೊಂದು ಹೂಂಕರಿಸಿತು...
"ಮೈ ಆಜಾದ್ ಹೂಂ, ಆಜಾದ್ ಹೀ ರಹೂಂಗಾ, ಆಜಾದ್ ಹೀ ಮರೂಂಗಾ!"
ಅಗಲವಾದ ತೇಜಸ್ವೀ ಮೊಗ ನಿಗಿ ನಿಗಿ ಹೊಳೆಯುವ ಅರಳು ಕಣ್ಣುಗಳು ದೃಢವಾದ ಮೈಕಟ್ಟಿನ ಚಂದ್ರಶೇಖರ ಶರ್ಮ, ತ್ರಿವರ್ಣ ಧ್ವಜ ಹಿಡಿದು ಶಂಖನಾದ ಮಾಡುತ್ತಾ ಮೆರವಣಿಗೆಯ ಮುಂದಾಳತ್ವ ವಹಿಸಿದ್ದ ವೀರ ಸಂನ್ಯಾಸಿ ಸ್ವಾಮಿ ಶಂಕರಾನಂದ ಬ್ರಹ್ಮಚಾರಿಯನ್ನು ಲಾಠಿಯಿಂದ ಸಾಯ ಬಡಿಯುತ್ತಿದ್ದ ಸಬ್ ಇನ್ಸ್ಪೆಕ್ಟರನ ಹಣೆಗೆ ಕಲ್ಲಿಂದ ಗುರಿಯಿಟ್ಟು ಹೊಡೆದಿದ್ದ! "ಅಹಿಂಸಾ ಪರಮೋ ಧರ್ಮ" ಎನ್ನುತ್ತಿದ್ದ ಚಳುವಳಿಯಲ್ಲಿ ಭಾಗವಹಿಸಿದ್ದ ಹದಿನೈದು ವರುಷದ ಹುಡುಗನಲ್ಲಿ "ಧರ್ಮ ಹಿಂಸಾ ತಥೈವಚಾ" ಎನ್ನುವ ಅದರ ಉತ್ತರಾರ್ಧ ಕಾಯಾ-ವಾಚಾ-ಮನಸಾ ಪ್ರತಿಧ್ವನಿಸಿತ್ತು. ಮ್ಯಾಜಿಸ್ಟ್ರೇಟ್ ವಿಚಾರಣೆ ನಡೆಸುತ್ತಾ ಹೆಸರೇನೆಂದು ಕೇಳಿದಾಗ "ಆಜಾದ್" ಎಂದು ಸಿಡಿಗುಂಡಿನಂತೆ ಹೊರಟ ಆ ಸ್ವರ ಮಧ್ಯಪ್ರದೇಶದ ಝೂಬುವಾ ಜಿಲ್ಲೆಯ ಭಾವರಾ ಎಂಬ ಪರ್ವತ, ಹಚ್ಚಹಸಿರಿನ ವನಸಿರಿ, ಬಳುಕುವ ತರಂಗಿಣಿಯನ್ನೊಳಗೊಂಡ ರಮಣೀಯ ಹಳ್ಳಿಯಲ್ಲಿ ಸೀತಾರಾಮ್ ತಿವಾರಿ-ಜಗರಾಣಿ ದೇವಿ ಸ್ವಾಭಿಮಾನಿ ದಂಪತಿಗಳ ದ್ವಿತೀಯ ಸಂಜಾತನಾಗಿ 1906 ಜುಲೈ 23, ಶ್ರಾವಣ ಶುದ್ಧ ದ್ವಿತೀಯ, ಸೋಮವಾರ ಧರೆಗಿಳಿದಿತ್ತು.

    ನಡೆಯಲು ಬರುವ ಮೊದಲೇ ಅಂಬೆಗಾಲಿಕ್ಕಿಕೊಂಡು ಹಳ್ಳಿಯ ಮನೆಮನೆಗೂ ನುಗ್ಗುತ್ತಿದ್ದ ಚಂದ್ರಶೇಖರ ಹಳ್ಳಿಯ ಹುಡುಗರ ಸೇನಾಪತಿಯಾಗಿ ಕಾಡು-ಮೇಡುಗಳಲ್ಲಿ ಅಲೆದಾಡುವುದು, ಬೆಟ್ಟಗುಡ್ದಗಳನ್ನು ಹತ್ತಿಳಿಯುವುದು, ತೋಟಗಳಿಗೆ ನುಗ್ಗಿ ಮರವೇರಿ ಹಣ್ಣುಗಳನ್ನು ಕಿತ್ತು ಪರಾರಿಯಾಗುವುದರ ಜೊತೆಜೊತೆಗೆ ಭಿಲ್ಲ ಹುಡುಗರ ಜೊತೆ ಶಿಕಾರಿಗೂ ಹೋಗುತ್ತಿದ್ದ. ಹುಲಿ ಶಿಕಾರಿಯಲ್ಲಿ ಅವನದು ಎತ್ತಿದ ಕೈ! ಜೋಬಟ್, ಧಾಂದಲಾ, ಮೇಘನಗರ್, ಪೆಟ್ಲಾವದ್, ಅಂಬುಮಾ, ರಾಣಾಪುರಗಳಲ್ಲಿ ಅವನದೇ ಪಾರಮ್ಯ. ಅವನ ದಂಡಯಾತ್ರೆಗೆ ಅಲಿರಾಜಪುರ ಮಾತ್ರವಲ್ಲದೆ ಸುತ್ತಮುತ್ತಲಿನ ಸಂಸ್ಥಾನಗಳೂ ಬಲಿಯಾಗಿದ್ದವು. ಅವನ ಸಾಹಸಗಾಥೆಗಳು ಮನೆಮಾತಾಗಿದ್ದವು. ಅನೇಕ ಯುವತಿಯರ ಶೀಲ ಕೆಡಿಸಿದ್ದ ತರುಣನೊಬ್ಬನಿಗೆ ಭಿಲ್ಲ ಪದ್ದತಿಯಂತೆ ಶಿಕ್ಷೆ ವಿಧಿಸುವಾಗ ಆಜಾದ್ ಪ್ರಯೋಗಿಸಿದ್ದ ಮೊದಲ ಬಾಣವೇ ಅವನ ಕಣ್ಣನ್ನು ಛೇದಿಸಿತ್ತು! ಮುಂದೆ ಭಾರತದ ಅತ್ಯಂತ ತೀಕ್ಷ್ಣ, ಕುಶಲ, ನಿಖರ ಗುರಿಕಾರನೆಂದು ಶತ್ರುಗಳಿಂದಲೇ ಮೆಚ್ಚುಗೆ ಗಳಿಸಿದ್ದ ಆಜಾದನಿಗೇ ಆ ಭಿಲ್ಲರೇ ಗುರುಗಳು! ಅವನು ಮನೆ ಬಿಟ್ಟು ಹೋದ ಎಷ್ಟೋ ವರ್ಷಗಳ ನಂತರವೂ ಅವನ ಮನೆಯ ಗೋಡೆಯಲ್ಲಿ ಅವನೇ ತಯಾರಿಸಿದ್ದ ಬಿಲ್ಲುಬಾಣಗಳು ನೇತಾಡುತ್ತಿದ್ದವು!

    ನ್ಯಾಯಪರತೆಯ ಗುಣಗಳು ಎಳವೆಯಿಂದಲೇ ಅವನಲ್ಲಿ ಗೋಚರಿಸುತ್ತಿದ್ದವು. ಎಂಟು ವರ್ಷದವನಿದ್ದಾಗ, ಹಿಂದಿ ಪಾಠ ಹೇಳಿಕೊಡುತ್ತಿದ್ದ ಗುರು ಮನೋಹರ್ ಒಮ್ಮೆ ತಪ್ಪು ಮಾಡಿದಾಗ ಬೆತ್ತದಲ್ಲಿ ಛಟೀರೆಂದು ಗುರುವಿಗೇ ಎರಡೇಟು ಬಿಗಿದಿದ್ದನಾತ. ಯಾಕೆಂದು ಪ್ರಶ್ನಿಸಿದರೆ "ಅಣ್ಣ ತಪ್ಪು ಮಾಡುವಾಗ ಪಂಡಿತಜೀ ಹೊಡೆಯೋಲ್ಲವೆ. ಈಗ ಅವರು ತಪ್ಪು ಮಾಡಿದರು. ಅದಕ್ಕೇ ಹೊಡೆದೆ" ಎಂದಿದ್ದ. ಆದರೆ ತಂದೆಯ ರೌದ್ರಾವತಾರ ಮುಂದೆಂದೂ ಹಿರಿಯರಿಗೆ ಅಗೌರವ ತೋರಿಸಬಾರದೆಂಬ ಪಾಠ ಕಲಿಸಿತ್ತು. ಶಾಲೆಗೆಂದು ಕಳುಹಿಸಿದರೆ ಗೆಳೆಯರ ಜೊತೆ ಕಾಡು ಸೇರಿ ಯುದ್ಧದಾಟವಾಡುವ, ಶಿಕಾರಿ ಮಾಡುವ ಮಗ ಸುಧಾರಿಸುವುದಿಲ್ಲ ಎಂದರಿತ ಅಪ್ಪ ತಹಶೀಲ್ದಾರೊಬ್ಬರ ಬಳಿ ಕೆಲಸಕ್ಕೆ ಸೇರಿಸಿದರು. ಆಗವನಿಗೆ ಬರೇ ಹನ್ನೊಂದು ವರ್ಷ! ಅಧಿಕಾರಿಗಳಿಗೆ ಸಲಾಂ ಹಾಕಲೊಪ್ಪದ ಅವನ ಪರಿಸ್ಥಿತಿ ಪಂಜರದೊಳಗೆ ಕೂಡಿ ಹಾಕಿದ ಸಿಂಹದಂತಾಗಿತ್ತು. ಹವಳದ ವ್ಯಾಪಾರಿಯೊಬ್ಬನ ಸಹಾಯದಿಂದ ಮುಂಬೈಗೆ ಬಂದಿಳಿದ ಈ ಹದ್ದಿನ ಮುಂದಿನ ಹಾರಾಟಕ್ಕೆ ಮೇರೆಯೇ ಇರಲಿಲ್ಲ! ಕೆಲವೇ ದಿವಸಗಳಲ್ಲಿ ಮೂಟೆ ಹೊರುವ ಕೆಲಸವೂ ಬೇಜಾರಾಗಿ, ಅಪ್ಪನ ಅಪೇಕ್ಷೆಯ ನೆನಪು ಬಂದು ಸಂಸ್ಕೃತ ಪಂಡಿತನಾಗುವ ಹಂಬಲದಿಂದ ಕಾಶಿಯ ಹಾದಿ ಹಿಡಿದ. ಚಂದ್ರಶೇಖರೀರ್ವರೂ ತಮ್ಮೀ ಮಿಲನಕ್ಕೆ ಕಾಯುತ್ತಿದ್ದರೇನೋ?

    ಕಾಶಿಯಲ್ಲಿ ಸಂಸ್ಕೃತ ಛಾತ್ರ ಸಮಿತಿಯ ಬೆನ್ನುಲುಬಾಗಿ ಕಾಂಗ್ರೆಸ್ಸಿನ ಚಳುವಳಿಗಳ ನೇತಾರನಾಗಿದ್ದರೂ ಅನ್ಯಾಯವಾಗುತ್ತಿದ್ದಾಗ ಅಹಿಂಸೆ ಎಂದು ಕೈಕಟ್ಟಿ ಕೂರಲಿಲ್ಲ. ಕಾಶಿಯ ಕುಖ್ಯಾತ ಗೂಂಡಾನನ್ನು ಸದೆಬಡಿದ, ಯುವತಿಯ ಮೇಲುಗುಳಿದ ಅಪ್ಘನ್ ವ್ಯಾಪಾರಿಯನ್ನು ಚಚ್ಚಿದ, ಆಂಗ್ಲ ಹುಡುಗರನ್ನು ತರಿದಂತಹ ಅನೇಕ ಘಟನೆಗಳಲ್ಲಿ ಶತಶತಮಾನಗಳಿಂದ ಹ್ರಾಸಗೊಂಡಿದ್ದ ಕ್ಷಾತ್ರ ಬ್ರಾಹ್ಮಣ ಆಜಾದನಲ್ಲಿ ಪುನರ್ಜನ್ಮ ಪಡೆದುದನ್ನು ಕಾಣಬಹುದು! 'ಆನಂದಮಠ'ದ ಸಂತಾನರ ಬ್ರಹ್ಮಚರ್ಯ ಜೀವನ ಆಜಾದನಲ್ಲಿ ಧೃಢನಿರ್ಧಾರವೊಂದನ್ನು ಮಾಡಿಸಿತ್ತು. ಚೌರಿಚೌರಾದ ನಂತರದ ಗಾಂಧಿಯ ನಿಷ್ಕ್ರಿಯತೆ ಆಜಾದನ ಸುಪ್ತಮನಸ್ಸಿನಲ್ಲಿದ್ದ ನಿಶಿತ ಗುರಿಯೆಡೆ ಸಾಗುವಂತೆ ಮಾಡಿತ್ತು. ಮಣಿಕರ್ಣಿಕಾ ಘಾಟಿನಲ್ಲಿ ಧಗಧಗಿಸುತ್ತಿದ್ದ ಅಸಂಖ್ಯ ಚಿತಾಗ್ನಿ ಚರಕದ ಬದಲು ಪಿಸ್ತೂಲ್ ಹಿಡಿದು ದುರ್ಗೆಯ ಆರಾಧಕನಾಗುವ ಪ್ರತಿಜ್ಞೆಗೆ ಸಾಕ್ಷಿಯಾಗಿತ್ತು!

    ಪಂಡಿತ ರಾಮಪ್ರಸಾದನ ಆತ್ಮೀಯ ಶಿಷ್ಯನಾಗಿ ತನ್ನ ಪ್ರತಿಭೆ, ಶಕ್ತಿ, ಬುದ್ಧಿಚಾತುರ್ಯಗಳಿಂದ ಕ್ರಾಂತಿಪಾಳಯದಲ್ಲಿ ಗಣನೀಯ ಸ್ಥಾನ ಗಳಿಸಿಬಿಟ್ಟ ಆಜಾದ್. ಅವನ ಗುಂಡು ಹಾರಿಸುವ ತರಬೇತಿಗೆ ಸಾಕ್ಷಿಯಾಗಿದ್ದ, ರಾಣಿ ಲಕ್ಷ್ಮೀಬಾಯಿಯ ಸಾಹಸಗಾಥೆ ಹಾಡುತ್ತಿದ್ದ, ನಾಡಿಗಿಂತ ಕಾಡೇ ವಾಸಿ ಎನ್ನುತ್ತಿದ್ದ ಅವನ ಮನೋಭಾವನೆಗೆ ಸ್ಪಂದಿಸಿದ್ದ ಝಾನ್ಸಿಯ ಕಾಡಂತೂ ಅವನಿಗೆ ಆಪ್ಯಾಯಮಾನವಾಗಿತ್ತು. ಒಮ್ಮೆ ಶಚೀಂದ್ರ ಗುಂಡು ತುಂಬಿದ್ದ ರಿವಾಲ್ವರನ್ನು ಹಿಡಿದು ಅದನ್ನು ಚಲಾಯಿಸುವುದರ ಬಗ್ಗೆ ಭಾವೋನ್ಮತ್ತನಾಗಿ ಭಾಷಣ ಬಿಗಿಯುತ್ತಿದ್ದ. ಅವನಿಗರಿವಿಲ್ಲದಂತೆ ಅವನ ಬೆರಳು ರಿವಾಲ್ವರಿನ ಕುದುರೆಯನ್ನದುಮಿತ್ತು. ಎದುರುಗಡೆ ಭಗವಾನ್ ದಾಸ್ ಕೂತಿದ್ದ. ಎಲ್ಲರೂ ಅವನ ಭಾಷಣದ ಝಲಕಿನಲ್ಲಿ ತೇಲಿ ಹೋಗಿದ್ದರು. ಆಜಾದ್ ತಕ್ಷಣ ಜಿಗಿದು ರಿವಾಲ್ವರ್ ಬಾಯಿಯನ್ನು ಛಾವಣಿಯ ಕಡೆ ತಿರುಗಿಸಿದ. ಮಿಕ್ಕವರೆಲ್ಲಾ ಭಾವಜೀವಿಗಳಾಗಿ ವಾಸ್ತವಲೋಕವನ್ನು ತೊರೆದಿದ್ದರೂ ಆಜಾದ್ ಯಾವಾಗಲೂ ಎಚ್ಚೆತ್ತಿರುತ್ತಿದ್ದ. ಇಂತಹ ಹಲವಾರು ಘಟನೆಗಳನ್ನು ಅವನ ಜೀವನದುದ್ದಕ್ಕೂ ಕಾಣಬಹುದು. ಕಾಕೋರೀ ಕಾಂಡದ ಮುಖ್ಯ ರೂವಾರಿಯಾಗಿದ್ದರೂ, ತನ್ನ ನಾಯಕರು-ಸಹವರ್ತಿಗಳೆಲ್ಲರೂ ಸಿಕ್ಕಿಬಿದ್ದಿದ್ದರೂ, ಪೊಲೀಸರು ಸತತವಾಗಿ ಹಿಂಬಾಲಿಸುತ್ತಿದ್ದರೂ ಆಜಾದ್ ಸಿಕ್ಕಿಬೀಳಲಿಲ್ಲ. ಕಾಕೋರಿ ಮೊಕದ್ದಮೆಗೆ ಬೇಕಾದ ಹಣ, ವಿಷಯಸಾಮಗ್ರಿ ಸಂಗ್ರಹ ಮಾಡುತ್ತಾ, ವಕೀಲರನ್ನು ನೇಮಿಸುತ್ತಾ ತನ್ನನ್ನು ಹುಡುಕುತ್ತಿದ್ದ ಪೊಲೀಸರ ಜೊತೆಯೇ "ಕಲಾಯಿ ಪಂಜಾ" ಆಡುತ್ತಾ ಕ್ರಾಂತಿ ಸಂಘಟನೆ ಮುಂದುವರೆಸಿದ್ದ. ಪೊಲೀಸ್ ಸೂಪರಿಡೆಂಟನ ಕೈಯಿಂದಲೇ ವಾಹನ ಚಾಲನ ಪರವಾನಗಿ ಪತ್ರವನ್ನು ಪಡೆದಿದ್ದ ಅವನ ಚಾಣಕ್ಷತೆಯಂತೂ ಅದ್ಭುತ!

    ಅತ್ಯಾಚಾರಿಗಳು, ಕಾಮುಕರು, ಲಂಪಟರು, ಕುಡಿದು ಹೆಂಡತಿ ಮಕ್ಕಳನ್ನು ಬಡಿಯುವವರನ್ನು ಕಂಡರೆ ಆಜಾದನಿಗಾಗುತ್ತಿರಲಿಲ್ಲ. ಅಸಹಾಯಕರ ಪರ ನಿಂತು ಅವನು ಅನ್ಯಾಯಗಾರರಿಗೆ ಬುದ್ಧಿಕಲಿಸಿದ ಘಟನೆಗಳು ಅಸಂಖ್ಯ. ಢಿಮರಾಪುರದ ಹನುಮಾನ್ ದೇವಸ್ಥಾನದಲ್ಲುಳಿದು ಪಂಡಿತ್ ಜೀ ಎನಿಸಿಕೊಂಡು ಇಡೀ ಊರಿನ ಮನೆಯ ಮಗನಂತೆ ಬಾಳಿದ ಆಜಾದ್ ಆ ಊರು ಬಿಡುವಾಗ ಊರಿಗೇ ಊರೇ ಅತ್ತು ಸ್ಮಶಾನ ಮೌನ ತಾಳಿತ್ತು! ಯೌವನವತಿ ವಿಧವೆಯೊಬ್ಬಳು ಕಾಮವಾಂಛೆಯಿಂದ ಅಜಾದನನ್ನು ಕಾಡಿದಾಗ ಇಪ್ಪತ್ತಡಿ ಎತ್ತರದ ಮಹಡಿಯಿಂದ ಜಿಗಿದು ಸ್ತ್ರೀಮೋಹ ಜಾಲದಿಂದಲೂ ಆಜಾದನಾಗುಳಿದದ್ದು ಇಲ್ಲೇ! ತನಗಾಗಿಯಾಗಲೀ ತನ್ನ ಹೆತ್ತವರಿಗಾಗಲೀ ಯಾರಿಂದಲೂ ಸಹಾಯ ಯಾಚಿಸದ, ಭಿಕ್ಷೆ ಬೇಡದ, ಕೊಟ್ಟವರಿಗೇ ಬೈದು ಕಳುಹಿದ, ತನ್ನ ಮಾತಾಪಿತರ ಸೇವೆಗೆ ತನ್ನ ಪಿಸ್ತೂಲಿನ ಎರಡು ಗುಂಡುಗಳು ಸಾಕು ಎಂದ ತ್ಯಾಗ ಮೂರ್ತಿ ಅವನು. ಹೊಕ್ಕ ಮನೆಯ ಅವಿಭಾಜ್ಯ ಅಂಗವಾಗಿ ಅವರ ಕಷ್ಟ-ಸುಖಗಳಲ್ಲಿ ಭಾಗಿಯಾಗಿ, ಮನೆಯ ವಾತಾವರಣ-ಸಂದರ್ಭ-ಆಚರಣೆಗೆ ತಕ್ಕಂತೆ ಮನೆಯ ಮಗನಂತೆ ಇರುತ್ತಿದ್ದ ಆಜಾದ್ ತನ್ನ ಗುರಿಯತ್ತ ಮುನ್ನಡೆಯಲು ನಾನಾವೇಶಗಳನ್ನೂ ಧರಿಸಬೇಕಾಗಿತ್ತು. ಆಂಗ್ಲ ಸಿಪಾಯಿಗಳೊಡನೆಯೇ ಸೈಕಲ್ ರೇಸ್ ಮಾಡುತ್ತಿದ್ದ ಅವನನ್ನು ಬುಂದೇಲ್ ಖಂಡದ ಅನೇಕ ರಾಜರೂ, ಸರದಾರರೂ ಆತ್ಮೀಯವಾಗಿ ಕಾಣುತ್ತಿದ್ದರು. ಆಜಾದನನ್ನು ಕಾಣುವ ಬಯಕೆ ಅನೇಕ ಗಣ್ಯರಿಗಿತ್ತು. ರಾಜಕೀಯ ನಾಯಕಿಯಾಗಿದ್ದ ಶ್ರೀಮಂತ ಮಹಿಳೆಯೋರ್ವಳು ತನಗೆ ಆಜಾದನೊಡನೆ ಭೇಟಿ ಕಲ್ಪಿಸಿದರೆ ಸಂಘಟನೆಗೆ 2000 ರೂಪಾಯಿ ಕೊಡುವುದಾಗಿ ರುದ್ರನಾರಾಯಣರ ಬಳಿ ಹೇಳಿದಾಗ ಆಜಾದ್ "ಜನರಿಗೆ ದರ್ಶನ ಕೊಟ್ಟು, ಹಸ್ತಾಕ್ಷರ ಕೊಟ್ಟು, ಹಣ ಸಂಗ್ರಹಿಸುತ್ತಾ ಓಡಾಡಲು ನಾನೇನು ಗಾಂಧಿಯಲ್ಲ" ಎಂದಿದ್ದ.

    ಒಂದೆರಡು ಒಣಗಿದ ರೊಟ್ಟಿಗಳು, ಒಂದು ಬೆಲ್ಲದ ತುಂಡೇ ಅವನ ಆಹಾರ. ಊಟಕ್ಕೆ ಕುಳಿತಾಗ ಉಳಿದೆಲ್ಲರನ್ನು ವಿಚಾರಿಸದೆ ಊಟ ಮಾಡುತ್ತಿರಲಿಲ್ಲ. ಸಂಗಡಿಗರು ಯಾರಾದರೂ ಉಪವಾಸವಿದ್ದದ್ದು ಗೊತ್ತಾದರೆ ತನ್ನ ಪಾಲಿನದ್ದನ್ನು ಅವರಿಗೆ ನೀಡಿ ತನ್ನ ಊಟವಾಗಿದೆ ಎನ್ನುತ್ತಿದ್ದ. ಸಾವಿರಾರು ರೂಪಾಯಿಗಳಿರುತ್ತಿದ್ದರೂ ಅವಶ್ಯಕತೆಗಿಂತ ಹೆಚ್ಚು ಚಿಕ್ಕಾಸನ್ನೂ ಖರ್ಚು ಮಾಡುತ್ತಿರಲಿಲ್ಲ. ಸಂಸ್ಥೆಯ ಒಂದೊಂದು ಕಾಸನ್ನು ವ್ಯರ್ಥವಾಗದಂತೆ ರಕ್ಷಿಸುವುದು, ಪ್ರತಿ ಖರ್ಚಿನ ಲೆಖ್ಖ ಇಡುವುದು ಸೇನಾಧಿಪತಿಯಾದ ತನ್ನ ನೈತಿಕ ಜವಾಬ್ದಾರಿ ಎನ್ನುವುದು ಅವನ ನಿಲುವಾಗಿತ್ತು. ಅನೇಕ ಬಾರಿ ಉಪವಾಸವೇ ಇರುತ್ತಿದ್ದ. ಒಮ್ಮೆ ಕಲ್ಕತ್ತೆಯ ಶ್ರೀಮಂತ ಮುದುಕಿಯ ಮನೆಗೆ ಡಕಾಯಿತಿ ಮಾಡಲು ಹೋಗಿದ್ದಾಗ ಸಂಗಡಿಗನೊಬ್ಬ ಮುದುಕಿಯ ಮಗಳನ್ನು ಅತ್ಯಾಚಾರ ಮಾಡಲು ಧಾವಿಸಿದಾಗ ಸರಕ್ಕನೆ ಅವನ ಕೈಹಿಡಿದು ನಿಲ್ಲಿಸಿದ್ದು ಮಾತ್ರವಲ್ಲದೆ, ತಮ್ಮ ಕಾರ್ಯ ಅಪವಿತ್ರವಾಯಿತೆಂದು ದರೋಡೆಯನ್ನೇ ನಿಲ್ಲಿಸಿ ಮುದುಕಿಯ ಕ್ಷಮೆ ಕೇಳಿದ್ದ ಆಜಾದ್! ಅವನು ಕಳ್ಳತನ ಮಾಡುವಾಗಲೂ ಉದಾತ್ತ ಧ್ಯೇಯದ ಪಾವಿತ್ರ್ಯತೆ ಇರುತ್ತಿತ್ತು. ಆಂಗ್ಲರನ್ನು ಶಿಕ್ಷಿಸಬೇಕಾಗಿ ಬಂದಾಗ ಅವರ ಪತ್ನಿ ಮಕ್ಕಳ ಮೇಲೆ ಕೈಮಾಡದಂತೆ ನಿರ್ದೇಶಿಸುತ್ತಿದ್ದ.
   
    1927ರಲ್ಲೊಮ್ಮೆ ಲಾರಿಯ ಹ್ಯಾಂಡಲ್ ತಿರುಗಿಸುವ ಸಹಾಯ ಮಾಡಲು ಹೋಗಿ ಆಜಾದನ ಕೈಯ ಮೂಳೆ ಮುರಿದಿತ್ತು. ವೈದ್ಯರ ಬಳಿ ಕ್ಲೋರೋಫಾರಂ ಕೊಡದೆಯೇ ಶಸ್ತ್ರಚಿಕಿತ್ಸೆ ಮಾಡಲು ಹೇಳಿದ ಆಜಾದ್. ಕ್ಲೋರೋಫಾರಂನಿಂದ ಜ್ಞಾನ ತಪ್ಪಿದಾಗ ತನ್ನ ರಹಸ್ಯಳನ್ನೆಲ್ಲಾ ಬಡಬಡಿಸಿದರೆ ಅನಾಹುತವಾದೀತೆಂಬ ಎಚ್ಚರಿಕೆ ಅವನದ್ದು. ಆದರೆ ವೈದ್ಯರು ರೋಗಿಯ ಮಾತು ಕೇಳುವುದು ಎಲ್ಲಾದರೂ ಉಂಟೇ? ಶಸ್ತ್ರಚಿಕಿತ್ಸೆ ನಡೆಯಿತು. ಆಜಾದ್ ಊಹಿಸಿದ್ದ ಅನಾಹುತ ನಡೆದೇ ಹೋಗಿತ್ತು. ಆದರೆ ವೈದ್ಯ ಆಂಗ್ಲರ ಬಾಲಬಡುಕನಾಗಿರಲಿಲ್ಲವಾದ್ದರಿಂದ ಆಜಾದ್ ಬಚಾವಾದ. ಮುಂದೆ ಅದೇ ಕೈ ಪ್ರಚಂಡ ಪರಾಕ್ರಮದಿಂದ ಶತ್ರುಗಳ ಮೇಲೆ ಅವಿರತ ಗುಂಡಿನ ಮಳೆಗರೆದುದನ್ನು ಕೇಳಿದಾಗ ಆ ವೈದ್ಯನಲ್ಲಿ ಎಂತಹ ಭಾವನೆಗಳು ಉಕ್ಕಿರಬಹುದು?

    ಬಿಸ್ಮಿಲ್ಲನ ಬಳಿಕ ಸಂಘಟನೆಯನ್ನು ಸಮರ್ಥವಾಗಿ ಮುನ್ನಡೆಸಿದ ಆಜಾದ್. ಲಾಲಾಜಿಯನ್ನು ಕೊಂದ ಸೇಡಿಗೆ ಸ್ಯಾಂಡರ್ಸನ ವಧೆಯ ನೇತೃತ್ವ ಆಜಾದನದ್ದೇ! ಬಾಂಬು ತಯಾರಿಕಾ ತಜ್ಞ ಜತೀನ್ ದಾಸನ ಮನವೊಲಿಸಿ ತನ್ನ ಸಂಗಡಿಗರಿಗೆ ಬಾಂಬು ತಯಾರಿಸುವ ತರಬೇತಿ ಕೊಡಿಸಿದ. ಮುಂದೆ ಆಜಾದನ ಯೋಜನೆಯಂತೆ ಅಸೆಂಬ್ಲಿಯಲ್ಲಿ ಭಗತ್-ದತ್ತರು ಸ್ಫೋಟಿಸಿದ್ದು ಹೀಗೆ ತಯಾರಾದ ಬಾಂಬುಗಳನ್ನೇ! ವಾಸ್ತವವಾಗಿ ಭಗತ್ ಸಿಂಗನ "ಶತ್ರುಗಳ ಕೈಗೆ ಸಿಕ್ಕಿ ಬೀಳುವ ಆತ್ಮಾರ್ಪಣೆ" ಆಜಾದನಿಗೆ ಸ್ವಲ್ಪವೂ ಇಷ್ಟವಿರಲಿಲ್ಲ. ಶತ್ರುಗಳಿಗೆ ಚಳ್ಳೆಹಣ್ಣು ತಿನ್ನಿಸಿ ಕೆಚ್ಚೆದೆಯಿಂದ ಹೋರಾಡಿ ವಿಜಯಿಯಾಗುವ ಚಾಣಕ್ಯ ನೀತಿ ಅವನದ್ದು. ಸಾವು ಬಂದಾಗಲೂ ವೀರರಂತೆ ಹೋರಾಡಿ ಸಾಯಬೇಕೆ ಹೊರತು ಶತ್ರುಗಳ ಕೈಗೆ ಸಿಕ್ಕಿ ಬೀಳುವುದು ವ್ಯಾವಹಾರಿಕವೂ ಅಲ್ಲ, ತರ್ಕಬದ್ಧವೂ ಅಲ್ಲ ಎನ್ನುವುದು ಅವನ ನಿಲುವು. ಆದರೆ ಭಗತನ ಹುಚ್ಚು ಆವೇಶದ ಮುಂದೆ ಆಜಾದ್ ಸೋಲಬೇಕಾಯ್ತು. ಭಗತನನ್ನು ಹಾರಿಸಿಕೊಂಡು ಬರುವ ಯೋಜನೆಯೂ ಭಗತನಿಂದ ಸಂಕೇತ ಬರದ ಕಾರಣ ವಿಫಲವಾಯಿತು.

    ಆಲ್ಫ್ರೆಡ್ ಪಾರ್ಕಿನಲ್ಲಿ ಸ್ನೇಹಿತ ಸುಖದೇವನ ಜೊತೆ ಭವಿಷ್ಯದ ಕ್ರಾಂತಿ ಸಂಘಟನೆಯ ರೂಪುರೇಷೆಗಳ ಬಗ್ಗೆ ಚರ್ಚಿಸುತ್ತಾ ಪತ್ರವಾಹಕನೊಬ್ಬನನ್ನು ನಿರೀಕ್ಷಿಸುತ್ತಾ ನೇರಳೆ ಮರದ ಕೆಳಗೆ ಕುಳಿತಿದ್ದ ಆಜಾದನನ್ನು ದ್ರೋಹಿ ವೀರಭದ್ರ ತಿವಾರಿಯ ಸೂಚನೆಯಂತೆ ಪೊಲೀಸ್ ಪಡೆ ಸುತ್ತುವರಿಯಿತು. ಗೆಳೆಯನನ್ನು ಸುರಕ್ಷಿತವಾಗಿ ರವಾನಿಸಿ ಬರೋಬ್ಬರಿ ಮೂವತ್ತೆರಡು ನಿಮಿಷಗಳ ಕಾಲ ಪ್ರಳಯರುದ್ರನಂತೆ, ಚಕ್ರವ್ಯೂಹ ಹೊಕ್ಕ ಅಭಿಮನ್ಯುವಿನಂತೆ ರಣ ಹೂಂಕಾರ ಮಾಡುತ್ತಾ ಹೋರಾಡಿತು ಆ ರಣಕೇಸರಿ! ಅವನ ರಣವಿಕ್ರಮ ಕಂಡು ಜಿಲ್ಲಾಧಿಕಾರಿ ಮಮ್ ಫೋರ್ಡ್ ಮೈಮರೆತು "ವ್ಹಾವ್ ವ್ಹಾಟ್ ಎ ವಂಡರ್ ಫುಲ್ ಷಾಟ್" ಎಂದು ಬೊಬ್ಬಿರಿಯುತ್ತಿದ್ದ. ಈ ಕಾಳಗವನ್ನು ವೀಕ್ಷಿಸಲು ಸುತ್ತಲೂ ಅಸಂಖ್ಯ ಜನ ಸೇರಿದ್ದರು. ಸಂಸ್ಥೆಯ ಹಣದ ಖರ್ಚಿನ ಲೆಖ್ಖದಂತೆ ಆಜಾದನಿಗೆ ಗುಂಡಿನ ಲೆಖ್ಖವೂ ಇತ್ತು. ಕಡೆಯ ಗುಂಡು...ಆಜಾದನ ಕಣ್ಣ ಮುಂದೆ ಅವನ ಪ್ರತಿಜ್ಞೆ ನಲಿಯತೊಡಗಿತು. ಪೊಲೀಸರತ್ತ ಗುರಿ ಮಾಡಿದ್ದ ಪಿಸ್ತೂಲು ತಲೆಯ ಕಡೆ ತಿರುಗಿತು. ಕ್ಷಣಾರ್ಧದಲ್ಲಿ ಅವನು ಅಜೇಯನಾಗಿಯೇ ವೀರಸ್ವರ್ಗ ಪಡೆದಿದ್ದ. ಅವನ ಸ್ವಾತಂತ್ರ್ಯದ ಪ್ರತಿಜ್ಞೆಯ ಘರ್ಜನೆಗೆ, ಸ್ವಾತಂತ್ರ್ಯ ಹೋರಾಟದ ದೀಕ್ಷೆಗೆ ಸಾಕ್ಷಿಯಾಗಿದ್ದ ಗಂಗೆ ಅವನ ಅಂತಿಮ ರಣಹೂಂಕಾರಕ್ಕೂ-ಪ್ರತಿಜ್ಞೆಯ ಸಾಕಾರಕ್ಕೂ ಸಾಕ್ಷಿಯಾಗಿ ಅವನನ್ನು ತನ್ನೊಡಲಲ್ಲಿ ಸೇರಿಸಿಕೊಂಡಳು.

    ತೇಜಸ್ವೀ ಕಂಗಳ ಹೊಳಪಿನ ಕೆಳಗೆ ಹುರಿಮೀಸೆ ಹೊಸೆಯುವ ಭೀಮಬಾಹುಗಳು; ಸದ್ಗುಣಗಳ ಗಣಿ, ಅಪ್ರತಿಮ ದೇಶಪ್ರೇಮ, ತೀಕ್ಷ್ಣ ಬುದ್ಧಿ, ಪ್ರಸಂಗಾವಧಾನ, ಲೋಕಸಂಗ್ರಹ, ಕಾರ್ಯ ಕೌಶಲ್ಯ, ಪ್ರಚಂಡ ಧೈರ್ಯ, ಭೀಮ ಪರಾಕ್ರಮ, ಅವಿರತ ಚಟುವಟಿಕೆ, ಅಮಿತ ಆಶಾವಾದದ ಮೇರು ಮೂರ್ತಿ; ಕ್ರಾಂತಿ ಸಂಘಟನೆಯ ಪ್ರಧಾನ ದಂಡನಾಯಕನಾಗಿ ಉತ್ತರ-ದಕ್ಷಿಣಾದ್ಯಂತ ಕ್ರಾಂತಿ ಸಂಘಟನೆ ಮಾಡಿ, ದೇಶವನ್ನೇ ತನ್ನ ಮನೆಯನ್ನಾಗಿ ಮಾಡಿಕೊಂಡು ಪರಿವ್ರಾಜಕ ಜೀವನ ನಡೆಸಿದ ಅಮಿತ ಸಾಹಸಿ. ಎಲ್ಲರಂತೆ ಹುಟ್ಟಿ ಬೆಳೆದ ಮಣ್ಣಿನ ಮಗನಾದರೂ ಅವನು ಶೀಲ ಕೆಡುವ ಸಮಯದಲ್ಲಿ ಜಾರಲಿಲ್ಲ. ಮೋಹಕ್ಕೆ ಬಲಿಯಾಗಲಿಲ್ಲ. ಹತಾಶೆಯಲ್ಲಿ ಮುಳುಗಲಿಲ್ಲ. ಪ್ರಳಯರುದ್ರನಂತೆ ಕಾದಿದ. ಕೇವಲ ಇಪ್ಪತ್ತೈದು ವರ್ಷಗಳ ಜೀವನಾವಧಿಯಲ್ಲಿ ಮಹಾದ್ಭುತವನ್ನು ಸಾಧಿಸಿದ. ಭಾರತ ಸರಕಾರ ಆಜಾದನ ಪಿಸ್ತೂಲನ್ನು ಕೇಳಿದಾಗ ನಾಟ್ ಬಾವರ್ "ಒಂದೇ ಒಂದು ಗುಂಡಿನಿಂದ ನನ್ನ ಇಡೀ ಕೈಯನ್ನು ಉಧ್ವಸ್ತಗೊಳಿಸಿದ ಆ ಮಹಾವೀರನ ಪಿಸ್ತೂಲನ್ನು ಹೇಗೆ ಕೊಡಲಿ?" ಎಂದಿದ್ದ. ಶತ್ರುವಿನ ಹೃದಯವನ್ನೂ ಗೆದ್ದ ಗಂಡುಗಲಿ ಅವನು. ಆಜಾದನದ್ದು ಒಂದು ಲೇಖನದಲ್ಲಿ ಹಿಡಿದಿಡಲು ಸಾಧ್ಯವಿಲ್ಲದ ವಿಕ್ರಮ!